Narendra Modi: ವಕ್ಫ್ (ತಿದ್ದುಪಡಿ) ಕಾಯ್ದೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ʼಮುಸ್ಲಿಂ ಮೂಲಭೂತವಾದಿಗಳನ್ನ ಸಮಾಧಾನಪಡಿಸಲು ಕಾಂಗ್ರೆಸ್ ಈ ರೀತಿಯ ನಿಲುವು ಹೊಂದಿದೆ. ಕಾಂಗ್ರೆಸ್ ಪಕ್ಷಕ್ಕೆ ಮುಸ್ಲಿಂರ ಕುರಿತು ಅಷ್ಟೊಂದು ಕಾಳಜಿ ಇದ್ದರೆ ಚುನಾವಣಾ ಟಿಕೆಟ್ಗಳಲ್ಲಿ ಶೇ.50ರಷ್ಟು ಮುಸ್ಲಿಂ ಅಭ್ಯರ್ಥಿಗಳಿಗೆ ಏಕೆ ಮೀಸಲಿಡುವುದಿಲ್ಲʼವೆಂದು ಅವರು ಪ್ರಶ್ನಿಸಿದ್ದಾರೆ.
ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ʼಈ ವಿಮಾನ ನಿಲ್ದಾಣವು ರಾಜ್ಯದ ಅಭಿವೃದ್ಧಿಯ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯಂದು ಅವರನ್ನು ಸ್ಮರಿಸಿದ ಮೋದಿ, ʼಅವರ ಹೋರಾಟವು ತಮ್ಮ ಸರ್ಕಾರಕ್ಕೆ ಸ್ಫೂರ್ತಿ ನೀಡುತ್ತದೆ. ಪ್ರತಿಯೊಂದು ನಿರ್ಧಾರ ಮತ್ತು ನೀತಿಯನ್ನ ಅಂಬೇಡ್ಕರ್ಗೆ ಸಮರ್ಪಿಸಲಾಗಿದೆʼ ಅಂತಾ ಹೇಳಿದರು.
ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬಾಲಕಿ ಅ*ತ್ಯಾಚಾರ, ಕೊ*ಲೆ ಕೇಸ್: ಇಡೀ ಸಮಾಜವೇ ತಲೆ ತಗ್ಗಿಸುವ ವಿಚಾರ
ಕಾಂಗ್ರೆಸ್ ಪಕ್ಷವನ್ನ ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ʼವಿರೋಧ ಪಕ್ಷವು ಅಧಿಕಾರ ಪಡೆಯಲು ಸಂವಿಧಾನವನ್ನ ಒಂದು ಸಾಧನವನ್ನಾಗಿ ಮಾಡಿಕೊಂಡಿದೆ. ತುರ್ತು ಪರಿಸ್ಥಿತಿಯ ಸಮಯದಲ್ಲಿ ಅಧಿಕಾರ ಉಳಿಸಿಕೊಳ್ಳಲು ಸಂವಿಧಾನದವನ್ನ ಕೊಲ್ಲಲಾಯಿತು. ಸಂವಿಧಾನವು ಜಾತ್ಯತೀತ ನಾಗರಿಕ ಸಂಹಿತೆಯ ಬಗ್ಗೆ ಮಾತನಾಡುತ್ತದೆ, ಆದರೆ ಕಾಂಗ್ರೆಸ್ ಅದನ್ನು ಎಂದಿಗೂ ಜಾರಿಗೆ ತರಲಿಲ್ಲ. ಇಂದು ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗಿದೆ. ದುರದೃಷ್ಟವಶಾತ್ ಕಾಂಗ್ರೆಸ್ ಅದನ್ನು ವಿರೋಧಿಸುತ್ತಿದೆ. ಮೀಸಲಾತಿಯ ಪ್ರಯೋಜನಗಳು SC/ST ಮತ್ತು ಒಬಿಸಿ ಸಮುದಾಯಗಳನ್ನು ತಲುಪಿದೆಯೇ ಅಂತಾ ಪರಿಶೀಲಿಸಲು ಕಾಂಗ್ರೆಸ್ ಎಂದಿಗೂ ತಲೆಕೆಡಿಸಿಕೊಳ್ಳಲಿಲ್ಲʼವೆಂದು ಕಿಡಿಕಾರಿದರು.
#WATCH | Hisar, Haryana | PM Modi says, "There are lakhs of hectares of land in the name of Waqf. If benefits from Waqf properties had been given to the needy, it would have benefitted them. But on land mafia benefitted from these properties ...The loot of the poor will stop with… pic.twitter.com/U61bZN6u8P
— ANI (@ANI) April 14, 2025
ಅಂಬೇಡ್ಕರ್ಗೆ ಕಾಂಗ್ರೆಸ್ ಮಾಡಿದ ಮೋಸವನ್ನ ನಾವು ಎಂದಿಗೂ ಮರೆಯಬಾರದು. ಪದೇ ಪದೇ ಅವಮಾನಿಸುವ ಮೂಲಕ ಅವರನ್ನು ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಲಾಯಿತು. ಕಾಂಗ್ರೆಸ್ ಅವರನ್ನು ಬೇರು ಸಹಿತ ಕಿತ್ತುಹಾಕಲು ಬಯಸಿತ್ತು. ಅವರನ್ನ ವ್ಯವಸ್ಥೆಯಿಂದ ದೂರವಿಡಲು ಪಿತೂರಿ ನಡೆಸಿತ್ತು. ಅಂಬೇಡ್ಕರ್ ಮರಣದ ನಂತರ ಅವರ ಸಾಧನೆಗಳನ್ನ ಅಳಿಸಲು ಸಹ ಪ್ರಯತ್ನಿಸಲಾಯಿತು. ಆದರೆ ಅವರು ಸಮಾನತೆಗಾಗಿ ನಿಂತರು, ಕಾಂಗ್ರೆಸ್ ದೇಶದಾದ್ಯಂತ ಮತಬ್ಯಾಂಕ್ ರಾಜಕೀಯದ ವೈರಸ್ ಹರಡಿತುʼ ಎಂದು ಪ್ರಧಾನಿ ಮೋದಿ ಕುಟುಕಿದರು.
ಇದನ್ನೂ ಓದಿ: ಹುಬ್ಬಳ್ಳಿ ದುರ್ಘಟನೆ: ಬಾಲಕಿ, ಆರೋಪಿ ಮರಣೋತ್ತರ ಪರೀಕ್ಷೆ ಬಗ್ಗೆ ಕಮಿಷನರ್ ಹೇಳಿಕೆ
ಕಾಂಗ್ರೆಸ್ನ ತುಷ್ಟೀಕರಣ ರಾಜಕೀಯ ಮುಸ್ಲಿಮರಿಗೂ ಹಾನಿ ಮಾಡಿದೆ. ಕಾಂಗ್ರೆಸ್ ಕೆಲ ಮೂಲಭೂತವಾದಿಗಳನ್ನ ಸಂತೋಷಪಡಿಸಿದೆ. ಸಮಾಜದ ಉಳಿದವರು ಅಶಿಕ್ಷಿತರು ಮತ್ತು ಬಡವರಾಗಿಯೇ ಉಳಿದಿದ್ದಾರೆ. ಈ ತಪ್ಪು ವಿಧಾನದ ದೊಡ್ಡ ಪುರಾವೆಯೇ ವಕ್ಫ್ ಕಾನೂನು. ನಾನು ಕಾಂಗ್ರೆಸ್ ನಾಯಕರಲ್ಲಿ ಕೇಳಲು ಬಯಸುತ್ತೇನೆ ನೀವು ಮುಸ್ಲಿಮರ ಬಗ್ಗೆ ಕಾಳಜಿ ವಹಿಸುತ್ತಿದ್ದರೆ, ಕಾಂಗ್ರೆಸ್ ಒಬ್ಬ ಮುಸ್ಲಿಮರನ್ನು ತನ್ನ ಪಕ್ಷದ ಅಧ್ಯಕ್ಷರನ್ನಾಗಿ ಏಕೆ ಮಾಡುವುದಿಲ್ಲ? ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರಿಗೆ ಶೇ.50ರಷ್ಟು ಟಿಕೆಟ್ ನೀಡಿ. ಗೆದ್ದರೆ ಅವರು ತಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತಾರೆ. ಆದರೆ ಮುಸ್ಲಿಮರಿಗೆ ಕಾಂಗ್ರೆಸ್ನಲ್ಲಿ ಏನನ್ನೂ ನೀಡುವುದಿಲ್ಲ. ಅವರು ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಾರೆ. ಲಕ್ಷಾಂತರ ಹೆಕ್ಟೇರ್ ಭೂಮಿ ವಕ್ಫ್ ಆಸ್ತಿಯಾಗಿದೆ. ವಕ್ಫ್ ಆಸ್ತಿಗಳನ್ನು ಪ್ರಾಮಾಣಿಕವಾಗಿ ಬಳಸಿದ್ದರೆ ಮುಸ್ಲಿಂ ಯುವಕರು ಸೈಕಲ್ ಪಂಕ್ಚರ್ ದುರಸ್ತಿ ಮಾಡುವ ಮೂಲಕ ಜೀವನೋಪಾಯ ಮಾಡುವ ಅಗತ್ಯವಿರಲಿಲ್ಲʼವೆಂದು ಮೋದಿ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.









