ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆ ಈಗ ಸಮಸ್ಯೆ ಸುಳಿಯಲ್ಲಿ ಸಿಲುಕಿದೆ.


COMMERCIAL BREAK
SCROLL TO CONTINUE READING

ಭಾರತ- ಜಪಾನಿನ ಜಂಟಿ ಯೋಜನೆಯಾದ ಬುಲೆಟ್ ಟ್ರೈನ್ ಈಗ ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ ರೈತರು ಭೂಸ್ವಾಧೀನ ವಿಚಾರವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಲೋಕಸಭೆ 2019 ಕ್ಕೂ ಮೊದಲು ಇದೊಂದು ಸಮಸ್ಯೆಯಾಗಿ ಕಾಡಲಿದೆ ಎನ್ನಲಾಗಿದೆ.


ಈಗಾಗಲೇ ಭೂಸ್ವಾಧೀನಕ್ಕೆ ಸರ್ಕಾರ ನೀಡುತ್ತಿರುವ ಪರಿಹಾರದ ಪ್ಯಾಕೇಜ್ ಗಳನ್ನು ಎರಡು ರಾಜ್ಯಗಳ ರೈತರು ತಿರಸ್ಕರಿಸಿದ್ದಾರೆ. ಭೂ ಸ್ವಾಧೀನ ಪ್ರಕ್ರಿಯೆ ಈಗಾಗಲೇ ವಿಳಂಭವಾಗಿದೆ. ಇನ್ನೂ ವಿಳಂಬವಾದರೆ 2023 ರ ಗಡುವಿನಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದಿಲ್ಲ ಎಂದು ಹೇಳಲಾಗಿದೆ.


ಬುಲೆಟ್ ರೈಲು ಯೋಜನೆ 2023 ರ ವೇಳೆಗೆ ಪೂರ್ಣಗೊಳ್ಳಬೇಕು. ಈಗ ಕೇವಲ ಐದು ವರ್ಷಗಳು ಮಾತ್ರ ಇವೆ. ಆದ್ದರಿಂದ ಭೂಮಿ ಸಮಸ್ಯೆ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಜಪಾನ ಆಗ್ರಹಿಸಿದೆ.