ಶ್ರೀರಾಮ ಮಂದಿರಕ್ಕೆ ಅಡಿಗಲ್ಲು ಹಾಕಲು ಅಯೋಧ್ಯೆಯತ್ತ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಅಯೋಧ್ಯೆಯತ್ತ ತೆರಳಿದ್ದಾರೆ.
ನವದೆಹಲಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ (Ram Mandir) ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೆಹಲಿಯಿಂದ ಅಯೋಧ್ಯೆ (Ayodhya)ಯತ್ತ ಪ್ರಯಾಣ ಬೆಳೆಸಿದ್ದಾರೆ.
ನರೇಂದ್ರ ಮೋದಿ (Narendra Modi) ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಅಯೋಧ್ಯೆಯತ್ತ ತೆರಳಿದ್ದಾರೆ.
ಅಯೋಧ್ಯೆ: ಮೋದಿ ರಾಜ್ನಲ್ಲಿ ಈಡೇರುತ್ತಿದೆ ಬಿಜೆಪಿಯ ಮತ್ತೊಂದು ಪ್ರಮುಖ ಭರವಸೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಇಡೀ ದಿನದ ಕಾರ್ಯಕ್ರಮದ ವಿವರಗಳು ಈ ರೀತಿ ಇವೆ.
9.35ಕ್ಕೆ ದೆಹಲಿಯಿಂದ ಹೊರಟಿರುವ ಪ್ರಧಾನಿ ಮೋದಿ
10.30ಕ್ಕೆ ಲಕ್ನೋ ವಿಮಾನ ನಿಲ್ದಾಣ ತಲುಪಲಿರುವ ಮೋದಿ
11.30ಕ್ಕೆ ಅಯೋಧ್ಯೆಯ ಸಾಕೇತ್ ಕಾಲೋನಿಗೆ ಆಗಮನ
11.45ಕ್ಕೆ ಅಯೋಧ್ಯೆಯ ಹನುಮಾನ್ಗಡಿಗೆ ಆಗಮನ
ಹನುಮಾನ್ ಪೂಜೆಯ ನಂತರ ಸರಯೂ ನದಿಗೆ ಪೂಜೆ
ಮಧ್ಯಾಹ್ನ 12 ಗಂಟೆಗೆ ಭೂಮಿಪೂಜೆ ಸ್ಥಳಕ್ಕೆ ಆಗಮನ
12.30ಕ್ಕೆ ಶಿಲಾನ್ಯಾಸ ಪಾರ್ಯಕ್ರಮದಲ್ಲಿ ಭಾಗಿ
12.40ಕ್ಕೆ ರಾಮಮಂದಿರಕ್ಕೆ ಅಡಿಗಲ್ಲು ಹಾಕಲಿರುವ ಮೋದಿ
ಶಿಲಾನ್ಯಾಸದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿ
1.10ಕ್ಕೆ ರಾಮಜನ್ಮಭೂಮಿ ಕಾಂಪ್ಲೆಕ್ಸ್ ವೀಕ್ಷಣೆ ಮಾಡಲಿರುವ ಮೋದಿ
ಬಳಿಕ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ನೃತ್ಯ ಗೋಪಾಲದಾಸ್ ಜೊತೆ ಚರ್ಚೆ
2:05ಕ್ಕೆ ಅಯೋಧ್ಯೆಯಿಂದ ಹೆಲಿಕಾಪ್ಟರ್ ಮೂಲಕ ಲಕ್ನೋಗೆ ಪ್ರಯಾಣ