ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿ ಸಾವು

ಮೃತನನ್ನು ಗುರುಗ್ರಾಮದ ದರ್ಬಾರಿಪುರ್ ಗ್ರಾಮದ ನಿವಾಸಿ ಅಖಿಲೇಶ್ ಕುಮಾರ್ ಎಂದು ಗುರುತಿಸಲಾಗಿದೆ.

Last Updated : Jan 9, 2019, 05:35 PM IST
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಖೈದಿ ಸಾವು title=
file photo

ಗುರುಗ್ರಾಮ: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 27 ವರ್ಷದ ಖೈದಿಯೊಬ್ಬ ಅನಾರೋಗ್ಯದಿಂದ ಸಾವನ್ನಪ್ಪಿರುವುದಾಗಿ ಗುರುಗ್ರಾಮ ಜೈಲಿನ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 

ಮೃತನನ್ನು ಗುರುಗ್ರಾಮದ ದರ್ಬಾರಿಪುರ್ ಗ್ರಾಮದ ನಿವಾಸಿ ಅಖಿಲೇಶ್ ಕುಮಾರ್ ಎಂದು ಗುರುತಿಸಲಾಗಿದೆ. "ಕಳೆದ ಕೆಲವು ದಿನಗಳಿಂದ ಈತ ಅನಾರೋಗ್ಯದಿಂದ ಬಳಲುತ್ತಿದ್ದ. ಅಲ್ಲದೆ ಉಸಿರಾಡಲು ಸಮಸ್ಯೆಯಾಗುತ್ತಿದೆ ಎಂದು ಹೇಳಿದ ಬಳಿಕ ಆತನನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ, ಮೃತ ಖೈದಿಯ ಕುಟುಂಬದವರು ಆತನ ಸಾವಿನ ಕಾರಣವನ್ನು ಅಲ್ಲಗಳೆದಿದ್ದು, ತನಿಖೆಗೆ ಒತ್ತಾಯಿಸಿದ ಬೆನ್ನಲ್ಲೇ, ಈ ಪ್ರಕರಣ ಕುರಿತಂತೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಲಾಗಿದೆ. 

ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಅಖಿಲೇಶ್ ಕುಮಾರ್'ನನ್ನು 2012ರಲ್ಲಿ ಪೊಲೀಸರು ಬಂಧಿಸಿದ್ದರು. ಬಳಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2013 ರಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. 
 

Trending News