Nupur Sharma Row : ನೂಪುರ್ ಶರ್ಮಾ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್!

ಉದಯಪುರ ಸೇರಿದಂತೆ ದೇಶಾದ್ಯಂತ ನಡೆದಿರುವ ಎಲ್ಲದಕ್ಕೂ ನೂಪುರ್ ಹೊಣೆ ಎಂದು ಸುಪ್ರೀಂ ಕೋರ್ಟ್ ದೂರಿದೆ.

Written by - Channabasava A Kashinakunti | Last Updated : Jul 1, 2022, 01:33 PM IST
  • ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ
  • ಉದಯಪುರ ಸೇರಿದಂತೆ ದೇಶಾದ್ಯಂತ ನಡೆದಿರುವ ಎಲ್ಲದಕ್ಕೂ ನೂಪುರ್ ಹೊಣೆ
  • ನೂಪುರ್ ಶರ್ಮಾ ಪರವಾಗಿ ಅವರ ಅರ್ಜಿಯನ್ನು ಹಿಂಪಡೆದಿದ್ದಾರೆ.
Nupur Sharma Row : ನೂಪುರ್ ಶರ್ಮಾ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್! title=

Prophet Muhammad Row : ಪ್ರವಾದಿ ಮುಹಮ್ಮದ್ ಹೇಳಿಕೆಗೆ ಸಂಬಂಧಪಟ್ಟಂತೆ ನೂಪುರ್ ಶರ್ಮಾ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಉದಯಪುರ ಸೇರಿದಂತೆ ದೇಶಾದ್ಯಂತ ನಡೆದಿರುವ ಎಲ್ಲದಕ್ಕೂ ನೂಪುರ್ ಹೊಣೆ ಎಂದು ಸುಪ್ರೀಂ ಕೋರ್ಟ್ ದೂರಿದೆ. ಅವರ ಹೇಳಿಕೆ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತಂದಿವೆ. ನ್ಯಾಯಾಲಯದ ಕಟ್ಟುನಿಟ್ಟಿನ ನಿರ್ಧಾರದ ನಂತರ ನೂಪುರ್ ಶರ್ಮಾ ತಮ್ಮ ಅರ್ಜಿಯನ್ನು ಹಿಂಪಡೆದಿದ್ದಾರೆ.

ನೂಪುರ್ ಶರ್ಮಾ ವಿರುದ್ಧ ಕಿಡಿಕಾರಿದ ಸುಪ್ರೀಂ!

ಈ ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಏನು ಮಾಡಿದ್ದಾರೆ ಎಂದು ಬಾಯಿ ಬಿಡಬೇಡಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈಗ ಅವರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕು. ಈ ಕಾಮೆಂಟ್ ಅವರ ದುರಹಂಕಾರದ ಮನೋಭಾವವನ್ನು ತೋರಿಸುತ್ತದೆ. ಅವರು ಯಾವುದೇ ಪಕ್ಷದ ವಕ್ತಾರರಾಗಿದ್ದರೆ ಏನು ಬೇಕಾದರೂ ಹೇಳುವ ಹಕ್ಕಿದೆ ಎಂದುಕೊಂಡಿದ್ದಾರೆ. ಆಂಕರ್‌ನ ಪ್ರಶ್ನೆಗೆ ಉತ್ತರ ನೀಡಿದ್ದೇನೆ ಎಂದು ನೂಪುರ್ ಪರ ವಕೀಲ ಮಣಿಂದರ್ ಸಿಂಗ್ ಹೇಳಿದಾಗ, ಅಂತಹ ಪ್ರಕರಣದಲ್ಲಿ ಆಂಕರ್ ವಿರುದ್ಧವೂ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಾಲಯ ಹೇಳಿದೆ.

'ಕ್ಷಮೆ ಕೇಳಲು ತಡವಾಗಿದೆ'

ಈ ಬಗ್ಗೆ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್, ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ಇಡೀ ದೇಶದ ತುಂಬಾ ಗಲಭೆ ಸೃಷ್ಟಿ ಮಾಡಿದೆ. ಉದಯಪುರದಲ್ಲಿ ನಡೆದ ಅಹಿತಕರ ಘಟನೆಗೆ ನೂಪುರ್‌ ಹೇಳಿಕೆ ಕಾರಣ. ನೂಪುರ್ ಹೇಳಿಕೆ ಆಕ್ಷೇಪಾರ್ಹ ಎಂದು ಕೋರ್ಟ್ ಹೇಳಿದೆ. ಈ ರೀತಿ ಹೇಳಿಕೆ ನೀಡಲು ಅವರಿಗೆ ಹಕ್ಕನ್ನು ನೀಡಿದವರು ಯಾರು? ಎಂದು ಸಿಡಿಮಿಡಿಗೊಂಡಿದೆ.

ನೂಪುರ್ ಪರವಾಗಿ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರು ತಮ್ಮ ಮಾತಿಗೆ ಕ್ಷಮೆಯಾಚಿಸಿದ್ದಾರೆ ಮತ್ತು ಅವರು ತಮ್ಮ ಮಾತುಗಳನ್ನು ಹಿಂಪಡೆದಿದ್ದಾರೆ ಎಂದು ಹೇಳಿದರು. ಈ ಕುರಿತು ನ್ಯಾಯಾಲಯವು ಕ್ಷಮೆಯಾಚಿಸಲು ತಡವಾಗಿದೆ ಎಂದು ಹೇಳಿದೆ. ಎರಡನೆಯದಾಗಿ, ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ 

ಪ್ರವಾದಿ ಮೊಹಮ್ಮದ್ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ತನಗೆ ನಿರಂತರವಾಗಿ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ ಎಂದು ನೂಪುರ್ ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ತನಿಖೆಗೆ ಸಹಕಾರಕ್ಕಾಗಿ ಬೇರೆ ಬೇರೆ ಊರುಗಳಿಗೆ ಹೋಗುವುದು ಸಾಧ್ಯವೇ ಇಲ್ಲ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಪರಿಹಾರ ನೀಡಲು ನಿರಾಕರಿಸಿದೆ. ಅವರು ಮಾಡಿದ್ದು ನಾಚಿಕೆಗೇಡಿನ ಸಂಗತಿ ಎಂದು ನ್ಯಾಯಾಲಯ ಹೇಳಿದೆ. ಇದಾದ ನಂತರ, ನೂಪುರ್ ಶರ್ಮಾ ಪರವಾಗಿ ಅವರ ಅರ್ಜಿಯನ್ನು ಹಿಂಪಡೆದಿದ್ದಾರೆ.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News