ನವದೆಹಲಿ: ಕೊರೊನಾ ವೈರಸ್‍ಗೆ ಭಾರತದಲ್ಲಿ 4.7 ಮಿಲಿಯನ್‍ಗೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆಂಬ  WHO ವರದಿ ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ರಾಹುಲ್, ‘ವಿಜ್ಞಾನ ಸುಳ್ಳು ಹೇಳುವುದಿಲ್ಲ, ಆದರೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಾರೆ’ ಎಂದು ಟೀಕಿಸಿದ್ದಾರೆ. ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ವ್ಯಾಪಿಸಿದ ಬಳಿಕ ಲಕ್ಷಾಂತರ ಜನರು ಮಾರಕ ವೈರಸ್‍ಗೆ ಬಲಿಯಾಗಿದ್ದಾರೆ. ಈ ವೇಳೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಕಡ್ಡಾಯವಾಗಿ 4 ಲಕ್ಷ ರೂ. ಪರಿಹಾರ ನೀಡುವ ಮೂಲಕ ಸರ್ಕಾರ ಅವರಿಗೆ ಆಸರೆಯಾಗಬೇಕು’ ರಾಹುಲ್ ಒತ್ತಾಯಿಸಿದ್ದಾರೆ.   


ಇದನ್ನೂ ಓದಿ: Viral News: ಬಿರಿಯಾನಿ ಜೊತೆಗೆ ಚಿನ್ನದ ಸರ ನುಂಗಿದ ವ್ಯಕ್ತಿ..!


ಕೊರೊನಾ ಸಾಂಕ್ರಾಮಿಕ ರೋಗದಿಂದ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಬಿಜೆಪಿ ಸರ್ಕಾರ ಹೇಳಿಕೊಂಡಂತೆ ಕೇವಲ 4.8 ಲಕ್ಷ ಅಲ್ಲ. ವಿಜ್ಞಾನ ಸುಳ್ಳು ಹೇಳುವುದಿಲ್ಲ, ಆದರೆ ಮೋದಿ ಸುಳ್ಳು ಹೇಳುತ್ತಾರೆ’ ಎಂದು ರಾಹುಲ್ ಗಾಂಧಿ ಕುಟುಕಿದ್ದಾರೆ.  


ಶಾಶ್ವತ ಸುಳ್ಳುಗಾರ ಏನು ಹೇಳುತ್ತಾರೆ?


ರಾಹುಲ್ ಗಾಂಧಿ..?’ ಎಂದು ಬಿಜೆಪಿ ಪ್ರಶ್ನಿಸಿ ಟ್ವೀಟ್ ಮಾಡಿದೆ.


ಇದನ್ನೂ ಓದಿ: Aadhar Card ನಲ್ಲಿ ಎಷ್ಟು ಬಾರಿ ಹೆಸರು - ವಿಳಾಸ ಬದಲಾಯಿಸಬಹುದು, ಇಲ್ಲಿದೆ UIDAI ನಿಯಮಗಳು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.