ನವದೆಹಲಿ: ಐತಿಹಾಸಿಕ ಭಾರತ ಜೋಡೋ ಯಾತ್ರೆಯನ್ನು ಹಮ್ಮಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಶ್ಲಾಘಿಸಿದ್ದಾರೆ.ಈ ಯಾತ್ರೆಯ ಮೂಲಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶವನ್ನು ಒಂದುಗೂಡಿಸಬಹುದು ಎನ್ನುವುದನ್ನು ಸಾಬೀತುಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆಯ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾದಯಾತ್ರೆಯು ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ, ಆದರೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ದೇಶದಲ್ಲಿ ಹರಡಿರುವ ದ್ವೇಷವನ್ನು ಎದುರಿಸಲು ಎಂದು ಹೇಳಿದರು.


ಇದನ್ನೂ ಓದಿ: ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬೊಮ್ಮಾಯಿ


ಯಾತ್ರೆಯು ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ, ದ್ವೇಷದ ವಿರುದ್ಧವಾಗಿತ್ತು. ಬಿಜೆಪಿಯವರು ದೇಶದಲ್ಲಿ ದ್ವೇಷವನ್ನು ಹರಡುತ್ತಿದ್ದಾರೆ. ನಿರುದ್ಯೋಗ ಮತ್ತು ಹಣದುಬ್ಬರದಂತಹ ವಿಷಯಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ದೇಶವನ್ನು ಒಗ್ಗೂಡಿಸಬಹುದು ಎಂದು ರಾಹುಲ್ ಗಾಂಧಿ ಸಾಬೀತುಪಡಿಸಿದ್ದಾರೆ ಎಂದು ಖರ್ಗೆ ರ್ಯಾಲಿಯಲ್ಲಿ ಹೇಳಿದರು.


ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಬಿಜೆಪಿ ದೇಶದಲ್ಲಿ ಬಡವರು-ಶ್ರೀಮಂತರ ವಿಭಜನೆಯನ್ನು ವಿಸ್ತರಿಸುವ ನೀತಿಯನ್ನು ಅನುಸರಿಸುತ್ತಿವೆ ಎಂದು ಅವರು ಆರೋಪಿಸಿದರು.


ಇದನ್ನೂ ಓದಿ: Political : ಸಿದ್ದರಾಮಯ್ಯ , ಡಿಕೆಶಿ, ಖರ್ಗೆಯವರ ಮಕ್ಕಳು ಬಿಜೆಪಿ ಸೇರಲಿದ್ದಾರೆ..!


"ಪ್ರಧಾನಿ ನರೇಂದ್ರ ಮೋದಿಜಿ, ಆರ್‌ಎಸ್‌ಎಸ್ ಮತ್ತು ಬಿಜೆಪಿ ಬಡವರನ್ನು ಬಡವರನ್ನು ಮತ್ತು ಶ್ರೀಮಂತರನ್ನು, ಶ್ರೀಮಂತರನ್ನಾಗಿ ಮಾಡಲು ಬಯಸುತ್ತವೆ. ಶೇಕಡಾ 10 ರಷ್ಟು ಜನರು ದೇಶದ ಶೇಕಡಾ 72 ರಷ್ಟು ಸಂಪತ್ತನ್ನು ಲೂಟಿ ಮಾಡುತ್ತಿದ್ದರೆ ಶೇಕಡಾ 50 ರಷ್ಟು ಜನರು ಕೇವಲ ಮೂರು ಶೇಕಡಾವನ್ನು ಹೊಂದಿದ್ದಾರೆ." ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.


ಇದಕ್ಕೂ ಮೊದಲು ಶ್ರೀನಗರದ ಭಾರತ್ ಜೋಡೋ ಯಾತ್ರಾ ಶಿಬಿರದಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.