ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ರಾಜೀನಾಮೆ ನಿರ್ಧಾರದಿಂದ  ಹಿಂದೆ ಸರಿಯುವುದಿಲ್ಲ ಎಂದು ಪಕ್ಷದ ನಾಯಕರಿಗೆ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆಎನ್ನಲಾಗಿದೆ. ಮೂಲಗಳ ಪ್ರಕಾರ, ರಾಹುಲ್ ಗಾಂಧಿಯವರು ಸೋಮವಾರ ಪಕ್ಷದ ಹಿರಿಯ ನಾಯಕರಾದ ಅಹ್ಮದ್ ಪಟೇಲ್ ಮತ್ತು ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿದ್ದು, ರಾಜೀನಾಮೆ ಹಿಂತೆಗೆದುಕೊಳ್ಳುವಂತೆ ಒತ್ತಾಯ ಮಾಡಬೇಡಿ. ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಪಕ್ಷದ ಅಧ್ಯಕ್ಷ ಸ್ಥಾನ ನೆಹರೂ ಕುಟುಂಬದ ಹೊರತಾಗಿರಬೇಕು ಎಂದು ರಾಹುಲ್ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕ ಗಾಂಧಿ ಹೆಸರನ್ನೂ ಪ್ರಸ್ತಾಪಿಸಬಾರದು ಎಂದು ರಾಹುಲ್ ರಾಹುಲ್ ತಿಳಿಸಿದ್ದಾರೆ. ವಾಸ್ತವವಾಗಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಅವರ ನಿಲುವನ್ನು ಸರ್ವಾನುಮತದಿಂದ ತಿರಸ್ಕರಿಸಿದೆ. 


ಏತನ್ಮಧ್ಯೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೆ.ಸಿ. ವೇಣುಗೋಪಾಲರನ್ನು ಭೇಟಿಯಾಗಿದ್ದು, ಸಿಡಬ್ಲ್ಯೂಸಿ ಸಭೆಯ ಮಾಧ್ಯಮಗಳಲ್ಲಿ ಕೆಲವು ಕಾಂಗ್ರೆಸ್ ಮುಖಂಡರಿಂದ ಸೋರಿಕೆಯಾದ ಮಾಹಿತಿಯು ಪಕ್ಷಕ್ಕೆ ನಷ್ಟವಾಗುತ್ತಿದೆ ಎಂದು ಹೇಳಿದರು. ಮಾಧ್ಯಮಗಳಲ್ಲಿ ನಡೆಯುತ್ತಿರುವ ಋಣಾತ್ಮಕ ಸುದ್ದಿಗಳೊಂದಿಗೆ ಕಾಂಗ್ರೆಸ್ ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ. ಇಂದು, ಕಾಂಗ್ರೆಸ್ನ ಮಾಧ್ಯಮ ಇಲಾಖೆಯ ಮುಖ್ಯಸ್ಥ ರಣದೀಪ್ ಸುರ್ಜೆವಾಲಾ ಈ ಹೇಳಿಕೆಯನ್ನು ಬಿಡುಗಡೆ ಮಾಡಿದರು: "ಸಿಡಬ್ಲ್ಯೂಸಿ ವೀಕ್ಷಣೆಗಳು ಮತ್ತು ಕ್ರಮ ವಿನಿಮಯದ ಪ್ರಜಾಪ್ರಭುತ್ವದ ಒಂದು ವೇದಿಕೆಯಾಗಿದೆ. ಸಭೆಯ ಶುದ್ಧತೆಯನ್ನು ಮಾಧ್ಯಮಗಳು ಒಳಗೊಂಡಂತೆ ಪ್ರತಿಯೊಬ್ಬರೂ ಬಯಸುತ್ತಾರೆ ಎಂದು ಕಾಂಗ್ರೆಸ್ ನಿರೀಕ್ಷಿಸುತ್ತದೆ. ಮಾಧ್ಯಮದ ಒಂದು ವಿಭಾಗದಲ್ಲಿ ವಿವಿಧ ಊಹಾಪೋಹಗಳನ್ನು ಹೊಂದಿರುವುದು ಸೂಕ್ತವಲ್ಲ" ಎಂದು ಅವರು ತಿಳಿಸಿದ್ದಾರೆ.


ಇದಲ್ಲದೆ, ರಾಹುಲ್ ಗಾಂಧಿಯವರು ತಮ್ಮ ಎಲ್ಲಾ ಸಭೆಗಳು ಮತ್ತು ಕಾರ್ಯಕ್ರಮಗಳನ್ನೂ ರದ್ದು ಮಾಡಿದ್ದಾರೆ. ಅವರೂ ಕಾಂಗ್ರೆಸ್ ಪಕ್ಷದ ಯಾವುದೇ ಸಭೆಯನ್ನು ಕರೆಯುವುದಾಗಲಿ ಅಥವಾ ಸಭೆಯಲ್ಲಿ ಭಾಗವಹಿಸುವುದಾಗಲಿ ಮಾಡುತ್ತಿಲ್ಲ. ಅಷ್ಟೇ ಅಲ್ಲ ಅವರು ಪಕ್ಷದ ವಿಜೇತ ಸಂಸದರನ್ನೂ ಕೂಡ ಅವರು ಭೇಟಿಯಾಗಿಲ್ಲ. ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿರುವ ಸಂಸದರೆಲ್ಲರೂ ರಾಹುಲ್ ಅವರ ಭೇಟಿಗಾಗಿ ಮನವಿ ಮಾಡಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎನ್ನಲಾಗಿದೆ.