ಈ ಭಾಗಗಳಲ್ಲಿ ಇನ್ನು 2 ದಿನ ಭರ್ಜರಿ ಮಳೆ: ವರುಣಾರ್ಭಟದ ಜೊತೆ ಗುಡುಗು ಸಹಿತ ಸುಳಿಗಾಳಿ ಬೀಸುವ ಭೀತಿ!

Rain Alert 23-09-2023: ಹವಾಮಾನ ಇಲಾಖೆಯ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 25 ರವರೆಗೆ ಹವಾಮಾನವು ಕೆಟ್ಟದಾಗಿರುತ್ತದೆ. ಈ ಅವಧಿಯಲ್ಲಿ ಮಧ್ಯಮ ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಂಭವವಿದೆ.

Written by - Bhavishya Shetty | Last Updated : Sep 23, 2023, 10:19 AM IST
    • ಹಿಮಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 25 ರವರೆಗೆ ಹವಾಮಾನವು ಕೆಟ್ಟದಾಗಿರುತ್ತದೆ
    • ಸೆ.25ರ ನಂತರ ರಾಜ್ಯದಲ್ಲಿ ಮಳೆ ಪ್ರಕ್ರಿಯೆ ನಿಲ್ಲುವ ಸಾಧ್ಯತೆ
    • ಉತ್ತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಈ ಭಾಗಗಳಲ್ಲಿ ಇನ್ನು 2 ದಿನ ಭರ್ಜರಿ ಮಳೆ: ವರುಣಾರ್ಭಟದ ಜೊತೆ ಗುಡುಗು ಸಹಿತ ಸುಳಿಗಾಳಿ ಬೀಸುವ ಭೀತಿ!   title=
Karnataka Rain

Rain Alert 23-09-2023: ಕಳೆದ ಕೆಲ ದಿನಗಳಿಂದ ದೇಶದ ಹವಾಮಾನ ವಿಚಿತ್ರವಾಗಿದೆ. ಕೆಲವು ಸ್ಥಳಗಳಲ್ಲಿ ಮಾನ್ಸೂನ್ ಸಕ್ರಿಯವಾಗಿದ್ದರೆ, ಮತ್ತೂ ಕೆಲವೆಡೆ ಬಿಸಿಲ ಬೇಗೆಗೆ ಜನ ಬಳಲುತ್ತಿದ್ದಾರೆ. ಈ ತಾಪಮಾನದ ನಡುವೆಯೇ ಹವಾಮಾನ ಇಲಾಖೆ ಇದೀಗ ಇತ್ತೀಚಿನ ಅಪ್ಡೇಟ್ ಬಿಡುಗಡೆ ಮಾಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 25 ರವರೆಗೆ ಹವಾಮಾನವು ಕೆಟ್ಟದಾಗಿರುತ್ತದೆ. ಈ ಅವಧಿಯಲ್ಲಿ ಮಧ್ಯಮ ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಂಭವವಿದೆ. ಸೆ.25ರ ನಂತರ ರಾಜ್ಯದಲ್ಲಿ ಮಳೆ ಪ್ರಕ್ರಿಯೆ ನಿಲ್ಲುವ ಸಾಧ್ಯತೆ ಇದ್ದು, ಇದರಿಂದ ಕನಿಷ್ಠ ತಾಪಮಾನದಲ್ಲಿ ಇಳಿಕೆ ದಾಖಲಾಗಲಿದೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ರೂ. 2,570 ಇಳಿಕೆ…! ಭರ್ಜರಿ ಕುಸಿತದ ಬಳಿಕ ಇವತ್ತೆಷ್ಟಿದೆ ರೇಟ್?

ಕೇರಳಕ್ಕೆ ಯೆಲ್ಲೋ ಅಲರ್ಟ್ ಘೋಷಣೆ:

ಮತ್ತೊಂದೆಡೆ, ಕೇರಳದ ಹಲವೆಡೆ ನಿರಂತರವಾಗಿ ಮಳೆಯಾಗುತ್ತಿದೆ. ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕುರಿತು ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

ಮುಂದಿನ ಕೆಲವು ಗಂಟೆಗಳಲ್ಲಿ ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮೂಲಗಳು ತಿಳಿಸಿವೆ.

ಈ ರಾಜ್ಯಗಳಲ್ಲಿ ಇಂದು ಮಳೆ:

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಇಂದು ಪೂರ್ವ ರಾಜಸ್ಥಾನ, ಉತ್ತರ ಪ್ರದೇಶದ ಕೆಲವು ಭಾಗಗಳು, ರಾಯಲಸೀಮಾ, ತಮಿಳುನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಪಶ್ಚಿಮ ಉತ್ತರ ಪ್ರದೇಶ, ಕರಾವಳಿ ಕರ್ನಾಟಕ, ಸೌರಾಷ್ಟ್ರ ಮತ್ತು ಕಚ್‌\ನಲ್ಲಿಯೂ ಸಹ ಲಘು ಮಳೆಯಾಗುವ ಸೂಚನೆ ಇದೆ.

ಇದನ್ನೂ ಓದಿ: ODI ಕ್ರಿಕೆಟ್’ನಲ್ಲಿ ಇದುವರೆಗೆ ಒಂದೇ ಒಂದು ಬಾರಿಯೂ ಔಟ್ ಆಗದ ಭಾರತೀಯ ಬ್ಯಾಟ್ಸ್’ಮನ್ ಯಾರು ಗೊತ್ತಾ

ಅದೇ ರೀತಿ ಅಸ್ಸಾಂ, ಅರುಣಾಚಲ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಉತ್ತರ ಛತ್ತೀಸ್‌ಗಢ, ಮಧ್ಯಪ್ರದೇಶದ ಕೆಲವು ಭಾಗಗಳು ಮತ್ತು ಉತ್ತರ ಮಧ್ಯ ಮಹಾರಾಷ್ಟ್ರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈಶಾನ್ಯ ಭಾರತ, ಒಡಿಶಾ, ವಿದರ್ಭ, ತೆಲಂಗಾಣ, ಕೊಂಕಣ ಮತ್ತು ಗೋವಾ, ಮರಾಠವಾಡ, ಕರ್ನಾಟಕ, ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಿಂದ ಸಾಧಾರಣ ಮಳೆಯಾಗಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News