India Weather Forecast: ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ದೇಶದಲ್ಲಿ ಮುಂಗಾರು ಮಳೆಯ ಅಬ್ಬರ ನಿಂತಿಲ್ಲ. ದೇಶದಾದ್ಯಂತ ನಿರಂತವಾಗಿ ಮಳೆಯಾಗುತ್ತಿದೆ. ಭಾರೀ ಮಳೆಯ ಕಾರಣ ಹವಾಮಾನ ಇಲಾಖೆ ಯಾವ್ಯಾವ ಪ್ರದೇಶಕ್ಕೆ ಎಚ್ಚರಿಕೆ ನೀಡಿದೆ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ. 


COMMERCIAL BREAK
SCROLL TO CONTINUE READING

ಉತ್ತರ ಭಾರತ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಚಂಡಮಾರುತದ ಪರಿಣಾಮವು ನಿರಂತರವಾಗಿ ಗೋಚರಿಸುತ್ತಿದೆ. ಪಶ್ಚಿಮಾಭಿಮುಖವಾಗಿ ಚಂಡಮಾರುತ ಚಲಿಸಿದ ನಂತರ ಮಹಾರಾಷ್ಟ್ರ, ಗೋವಾ ಮತ್ತು ಗುಜರಾತ್‌ನಲ್ಲಿ ಅತಿಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಬಗ್ಗೆ ಮಾತನಾಡಿರುವ ಹವಾಮಾನ ಇಲಾಖೆಯ ಹಿರಿಯ ವಿಜ್ಞಾನಿ ನರೇಶ್ ಕುಮಾರ್, ‘ಚಂಡಮಾರುತದ ಗಾಳಿಯು ಪಶ್ಚಿಮಕ್ಕೆ ಚಲಿಸುತ್ತಿರುವುದರಿಂದ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿದೆ. ಕೊಂಕಣ, ಗೋವಾದಲ್ಲೂ ಮಳೆಯಾಗಲಿದೆ. ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ರೆಡ್ ಅಲರ್ಟ್ ನೀಡಿದ್ದೇವೆʼ ಎಂದಿದ್ದಾರೆ.


ಇದನ್ನೂ ಓದಿ: ಮಂಗಳ ಗ್ರಹದಲ್ಲಿ ಹಸಿರು ಬಣ್ಣಕ್ಕೆ ತಿರುಗುತ್ತೆ ಮಾನವನ ದೇಹ.. ಕಣ್ಣುಗಳ ಮೇಲೂ ಆಗುತ್ತೆ ಈ ಪರಿಣಾಮ!


ಭಾನುವಾರ ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದ್ದು, ಧರಮ್ ಗಂಗಾ ಸೇರಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಭಾರೀ ಮಳೆಯಿಂದ ಪಶ್ಚಿಮ ಬಂಗಾಳದ ಅನೇಕ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಸೋಮವಾರದವರೆಗೂ ಭಾರೀ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಮುಂದಿನ ೩ ದಿನಗಳಲ್ಲಿ ಅನೇಕ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದ್ದು, ಮುಂದಿನ ೪ ದಿನಗಳಲ್ಲಿ ಅಲ್ಲಲ್ಲಿ ವ್ಯಾಪಕ ಮಳೆಯಾಗಲಿದೆ. ಶುಕ್ರವಾರ ಬೆಳಗಿನವರೆಗೆ ಡಾರ್ಜಿಲಿಂಗ್, ಕಾಲಿಂಪಾಂಗ್, ಅಲಿಪುರ್ದೌರ್, ಜಲ್ಪೈಗುರಿ ಮತ್ತು ಕೂಚ್ ಬೆಹಾರ್ ಉಪ ಹಿಮಾಲಯನ್ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗಿತ್ತು. ಇದಲ್ಲದೇ ಕೋಲ್ಕತ್ತಾ ಸೇರಿ ದಕ್ಷಿಣ ಬಂಗಾಳದ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 


ಹವಾಮಾನ ವರದಿಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಮಹಾರಾಷ್ಟ್ರದ ಉತ್ತರ ಕರಾವಳಿ, ಉತ್ತರ ಮಧ್ಯ ಮಹಾರಾಷ್ಟ್ರ, ದಕ್ಷಿಣ ಗುಜರಾತ್, ಬಿಹಾರ ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಮಧ್ಯಪ್ರದೇಶದ ಕೆಲ ಭಾಗಗಳು ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಶಾನ್ಯ ಭಾರತ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಕರಾವಳಿ ಕರ್ನಾಟಕ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಪಂಜಾಬ್‌ನ ಕೆಲ ಭಾಗಗಳು, ಉತ್ತರ ಹರಿಯಾಣ, ಪೂರ್ವ ರಾಜಸ್ಥಾನ ಮತ್ತು ತಮಿಳುನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 


ಇದನ್ನೂ ಓದಿ: 7ನೇ ವೇತನ ಆಯೋಗ: ದೀಪಾವಳಿಗೆ ಮುಂಚಿತವಾಗಿ ಸರ್ಕಾರಿ ಈ ರಾಜ್ಯದ ನೌಕರರಿಗೆ ಶೇ 4% ರಷ್ಟು ತುಟ್ಟಿ ಭತ್ಯೆ ಹೆಚ್ಚಳ 


ಜಮ್ಮು ಮತ್ತು ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ದೆಹಲಿ, ಪಶ್ಚಿಮ ಗುಜರಾತ್, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದಲ್ಲೂ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.