ಇಂದು ಈ ಭಾಗಗಳಲ್ಲಿ ಕುಂಭದ್ರೋಣ ಮಳೆ: ಗುಡುಗು, ಬಲವಾದ ಗಾಳಿ ಸಹಿತ ಜಲಪ್ರಳಯದ ಮುನ್ನೆಚ್ಚರಿಕೆ

Weather Forecast Today: ಬಹಳ ದಿನಗಳ ಬಳಿಕ ಮುಂಗಾರು ಮತ್ತೆ ಚುರುಕಾಗಿದೆ. ಇಂದು ಕೂಡ ಹವಾಮಾನ ಇಲಾಖೆ (ಐಎಂಡಿ) ಹಲವೆಡೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಸಕ್ರಿಯವಾಗಿದ್ದು, ಇದರಿಂದಾಗಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Written by - Bhavishya Shetty | Last Updated : Sep 13, 2023, 08:42 AM IST
    • ಹವಾಮಾನ ಇಲಾಖೆ ಹಲವೆಡೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ
    • ಉತ್ತರಾಖಂಡದಲ್ಲಿ 2 ದಿನಗಳ ಕಾಲ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ
    • ರಾಜ್ಯದ ಕರಾವಳಿ ಭಾಗ ಸೇರಿದಂತೆ ಅನೇಕ ಭಾಗಗಳಲ್ಲಿ ಮುಂಗಾರು ಪ್ರಾರಂಭವಾಗಿದೆ
ಇಂದು ಈ ಭಾಗಗಳಲ್ಲಿ ಕುಂಭದ್ರೋಣ ಮಳೆ: ಗುಡುಗು, ಬಲವಾದ ಗಾಳಿ ಸಹಿತ ಜಲಪ್ರಳಯದ ಮುನ್ನೆಚ್ಚರಿಕೆ title=
Karnataka Rain

Weather Forecast Today: ದೇಶದ ಕೆಲವು ರಾಜ್ಯಗಳಲ್ಲಿ ಮಳೆಯಿಂದಾಗಿ ಹವಾಮಾನದ ಸ್ವರೂಪ ಬದಲಾಗಿದೆ. ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದ ಕೆಲವು ನಗರಗಳಲ್ಲಿ ಮಳೆಯಿಂದ ಭಾರೀ ಅನಾಹುತ ಸೃಷ್ಟಿಯಾಗಿದೆ. ಪರಿಣಾಮ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ.

ಬಹಳ ದಿನಗಳ ಬಳಿಕ ಮುಂಗಾರು ಮತ್ತೆ ಚುರುಕಾಗಿದೆ. ಇಂದು ಕೂಡ ಹವಾಮಾನ ಇಲಾಖೆ (ಐಎಂಡಿ) ಹಲವೆಡೆ ಭಾರಿ ಮಳೆಯಾಗುವ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಸಕ್ರಿಯವಾಗಿದ್ದು, ಇದರಿಂದಾಗಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:ಭಾರತದ 5 ವಿಕೆಟ್ ಕಬಳಿಸಿದ 20 ವರ್ಷದ ಸ್ಪಿನ್ನರ್ ದುನಿತ್ ವೆಲ್ಲಲಾಗೆ ಯಾರು ಗೊತ್ತಾ?

ಭಾರೀ ಮಳೆ ಎಚ್ಚರಿಕೆ…

ಇಂದು, ಪಶ್ಚಿಮ ಬಂಗಾಳ, ಒಡಿಶಾ, ಬಿಹಾರ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ, ಅನೇಕ ಭಾಗಗಳಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಇನ್ನೊಂದೆಡೆ ಮಧ್ಯಪ್ರದೇಶದಲ್ಲಿ ಮುಂಗಾರು ಮತ್ತೆ ಚುರುಕಾಗಿದೆ. ಹಲವು ಜಿಲ್ಲೆಗಳಲ್ಲಿ ಮಿಂಚು, ಧಾರಾಕಾರ ಮಳೆಯ ಎಚ್ಚರಿಕೆ ನೀಡಲಾಗಿದೆ. ಜಾರ್ಖಂಡ್, ಕೇರಳ, ಕರಾವಳಿ ಕರ್ನಾಟಕ, ಒಳನಾಡು ಕರ್ನಾಟಕ, ತೆಲಂಗಾಣ, ಕೊಂಕಣ, ಗೋವಾ, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರಾಖಂಡಕ್ಕೆ ಎಚ್ಚರಿಕೆ..

ಉತ್ತರಾಖಂಡದಲ್ಲಿ ಮತ್ತೆ ಮುಂಗಾರು ಮಳೆ ಮುಂದುವರಿದಿದೆ. ಹವಾಮಾನ ಇಲಾಖೆ ಪ್ರಕಾರ ಮಳೆಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಸಾಧ್ಯತೆ ಇಲ್ಲ. ಹೀಗಾಗಿ ಉತ್ತರಾಖಂಡದಲ್ಲಿ 2 ದಿನಗಳ ಕಾಲ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಡೆಹ್ರಾಡೂನ್, ಚಂಪಾವತ್, ನೈನಿತಾಲ್, ಉಧಮ್ ಸಿಂಗ್ ನಗರ, ತೆಹ್ರಿ, ಪೌರಿ, ಬಾಗೇಶ್ವರ್, ಚಮೋಲಿ, ಅಲ್ಮೋರಾ, ಉತ್ತರಕಾಶಿ, ಹರಿದ್ವಾರ ಮತ್ತು ಬಾಗೇಶ್ವರದಲ್ಲಿ ಧಾರಾಕಾರ ಮಳೆಯಾಗುವ ಸೂಚನೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದ್ದು, ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಕರ್ನಾಟಕ ಹವಾಮಾನ ಪರಿಸ್ಥಿತಿ ಹೀಗಿದೆ…

ರಾಜ್ಯದ ಕರಾವಳಿ ಭಾಗ ಸೇರಿದಂತೆ ಅನೇಕ ಭಾಗಗಳಲ್ಲಿ ಮುಂಗಾರು ಪ್ರಾರಂಭವಾಗಿದೆ. ಕೆಲವೆಡೆ ಧಾರಾಕಾರ ಮಳೆಯಾಗಿದ್ದರೆ, ಇನ್ನೂ ಕೆಲವೆಡೆ ಮಳೆ ಸಿಂಚನವಾಗಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಭಾರೀಯಿಂದ ಸಾಧಾರಾಣ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಈ ರಾಶಿಯವರಿಗೆ ಗಣೇಶನ ಅನುಗ್ರಹ: ಇಂದು ಈಡೇರಲಿದೆ ಬಹುದಿನದ ಕನಸು, ಜೇಬು ತುಂಬಾ ದುಡ್ಡೋ ದುಡ್ದು

ಇನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಕುಮಟಾ, ಅಂಕೋಲಾ, ಶಿರಸಿ ತಾಲೂಕಿನ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್

Trending News