Today Weather Update 28-08-2023: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇಂದು ಮತ್ತು ನಾಳೆ ಅಂಡಮಾನ್-ನಿಕೋಬಾರ್ ನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೇಘಾಲಯ ಮತ್ತು ಅಸ್ಸಾಂನ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಪುದುಚೇರಿ, ಉತ್ತರ ತಮಿಳುನಾಡು ಮತ್ತು ಕಾರೈಕಲ್ ನಲ್ಲೂ ಭಾರೀ ಮಳೆಯಾಗಲಿದೆ. ಮತ್ತೊಂದೆಡೆ ಕೇರಳ ಮತ್ತು ತಮಿಳುನಾಡಿನ ಹಲವೆಡೆ ಆರ್ದ್ರ ವಾತಾವರಣ ಇರುವ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಜಾರ್ಖಂಡ್ ಮತ್ತು ಗುಜರಾತ್‌’ನ ವಿವಿಧ ಭಾಗಗಳಲ್ಲಿ ಲಘು ಮಳೆಯಾಗಿದೆ. ಅಂತೆಯೇ, ಜಮ್ಮು-ಕಾಶ್ಮೀರ, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಲಡಾಖ್, ಹಿಮಾಚಲ ಪ್ರದೇಶ, ಉಪ-ಹಿಮಾಲಯ ಪಶ್ಚಿಮ ಬಂಗಾಳದ ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.


ಇದನ್ನೂ ಓದಿ: ಶ್ರಾವಣ ಸೋಮವಾರದಂದು ಈ ಮಂತ್ರ ಪಠಿಸಿದರೆ ದುರಾದೃಷ್ಟವೇ ಅದೃಷ್ಟವಾಗುವುದು: ಸದಾ ಕಷ್ಟದಿಂದ ಮುಕ್ತಿ ನೀಡುವ ಮಹಾದೇವ!


ಈಶಾನ್ಯ ಭಾರತ, ಗಂಗಾನದಿ ಪಶ್ಚಿಮ ಬಂಗಾಳ, ಸಿಕ್ಕಿಂ, ಕರಾವಳಿ ಒಡಿಶಾ, ದಕ್ಷಿಣ ಛತ್ತೀಸ್‌’ಗಢ, ಕರಾವಳಿ ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಉತ್ತರ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಕೊಂಕಣ-ಗೋವಾ, ಉತ್ತರ ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪಗಳಲ್ಲಿ ಲಘುವಾಗಿ ಸಾಧಾರಣ ಮಳೆಯಾಗಿದೆ.


ಇಂದು ಈ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ:


ಇಂದಿನ ಹವಾಮಾನ ವರದಿ ಪ್ರಕಾರ, ಈಶಾನ್ಯ ಭಾರತ, ಕರಾವಳಿ ತಮಿಳುನಾಡಿನ ಕೆಲವು ಭಾಗಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಪ ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಕೊಂಕಣ ಮತ್ತು ಗೋವಾದಲ್ಲಿ ತೀವ್ರತರವಾದ ಲಘು ಮಳೆಯಿಂದ ಸಾಧಾರಣ ಮಳೆ ಬೀಳುವ ಮುನ್ಸೂಚನೆ ಇದೆ. ಉತ್ತರ ಪ್ರದೇಶ, ಉತ್ತರ ಪಂಜಾಬ್, ಉತ್ತರ ಹರಿಯಾಣ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ವಿದರ್ಭ ಮತ್ತು ದಕ್ಷಿಣ ಗುಜರಾತ್‌’ನಲ್ಲಿ ಒಂದೆರಡು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.


ಈ ರಾಜ್ಯಗಳಲ್ಲಿ ಇಂದು ಮೋಡ ಕವಿದ ವಾತಾವರಣ:


ಪಶ್ಚಿಮ ಹಿಮಾಲಯ ಬೆಟ್ಟಗಳ ಕೆಲವು ಭಾಗಗಳಲ್ಲಿ ಸಹ ಲಘು ಮಳೆ ಸಾಧ್ಯತೆ ಕಂಡುಬಂದಿದೆ. ಒಡಿಶಾ, ದಕ್ಷಿಣ ಛತ್ತೀಸ್‌ಗಢ, ತೆಲಂಗಾಣ, ಮಧ್ಯ ಮಹಾರಾಷ್ಟ್ರ, ಕರಾವಳಿ ಕರ್ನಾಟಕ, ತಮಿಳುನಾಡು, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲೂ ಸಾಧಾರಣ ಮಳೆಯಾಗಬಹುದು.


ಕರ್ನಾಟಕದ ಮಳೆ ಅಪ್ಡೇಟ್:


ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಅಧಿಕಾರಿಗಳ ಪ್ರಕಾರ, ನೈಋತ್ಯ ಮಾನ್ಸೂನ್ ಕರಾವಳಿ ಕರ್ನಾಟಕದಲ್ಲಿ ದುರ್ಬಲವಾಗಿದೆ ಮತ್ತು ಕರ್ನಾಟಕದ ಒಳನಾಡಿನಲ್ಲಿ ಸಾಮಾನ್ಯವಾಗಿದೆ.


ಇದನ್ನೂ ಓದಿ:  ಶ್ರಾವಣ ಮಾಸದ ಶುಭ 6ನೇ ಸೋಮವಾರದಂದು ಈ ರಾಶಿಯವರಿಗೆ ಸರ್ವ ಸಂಪತ್ತು ಕರುಣಿಸಲಿದ್ದಾನೆ ಪರಶಿವ


ಮುಂದಿನ ಎರಡು ದಿನಗಳವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.