ನವ ದೆಹಲಿ: ದೇಶದಾದ್ಯಂತ ಸದ್ದು ಮಾಡುತ್ತಿರುವ ಹಿರಿಯ ಪತ್ರಕರ್ತೆ ಮತ್ತು ಲಂಕೇಶ್ ಪತ್ರಿಕೆಯ ಸಂಪಾದಕಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಿದೆ. 


COMMERCIAL BREAK
SCROLL TO CONTINUE READING

ಗೌರಿ ಹತ್ಯೆ ಕುರಿತ ಮಾಹಿತಿಯನ್ನು ಕುರಿತ ಪೂರ್ಣ ಮಾಹಿತಿಯನ್ನು ತರಿಸಿಕೊಳ್ಳುವಂತೆ ಗೃಹ ಸಚಿವ ರಾಜ್ ನಾಥ್ ಸಿಂಗ್ ಗೃಹ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಘಟನೆ ಕುರಿತು ಕರ್ನಾಟಕ ಸರ್ಕಾರದಿಂದ ವರದಿ ತರಿಸಿಕೊಳ್ಳುವಂತೆ ಗೃಹ ಸಚಿವರು ಸೂಚಿಸಿರುವುದಾಗಿ ಗೃಹ ಇಲಾಖೆ ತಿಳಿಸಿದೆ.