ನವದೆಹಲಿ: ಪ್ರತಿವರ್ಷದಂತೆ ಈ ವರ್ಷವೂ ರಕ್ಷಾಬಂಧನದ ಉತ್ಸವ ನಡೆಯುತ್ತಿದೆ. ಇಂದು(ಆಗಸ್ಟ್ 22) ದೇಶದಾದ್ಯಂತ ರಕ್ಷಾ ಬಂಧನ(Raksha Bandhan 2021)ದ ಹಬ್ಬವನ್ನು ಆಚರಿಸಲಾಗುತ್ತಿದೆ. ಅಣ್ಣ-ತಂಗಿಯರ ಮಧುರ ಸಂಬಂಧಕ್ಕೆ ಸಾಕ್ಷಿಯಾಗಿರುವ ಆಚರಣೆಯಿದು. ಸಹೋದರರು-ಸಹೋದರಿಯರ ಬಾಂಧವ್ಯವನ್ನು ರಕ್ಷಾ ಬಂಧನ ಮತ್ತಷ್ಟು ಗಟ್ಟಿಗೊಳಿಸುತ್ತದೆ. ಈ ಹಿನ್ನೆಲೆ ದೇಶದ ಜನತೆಗೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ರಕ್ಷಾ ಬಂಧನದ ಶುಭಾಶಯ ತಿಳಿಸಿದ್ದಾರೆ. 


ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಇನ್ನಿಲ್ಲ


COMMERCIAL BREAK
SCROLL TO CONTINUE READING

‘ಪವಿತ್ರ ರಕ್ಷಾ ಬಂಧನದ ದಿನದ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕೂಡ ರಕ್ಷಾ ಬಂಧನದ ಶುಭಾಶಯ ಕೋರಿದ್ದಾರೆ. ‘ರಕ್ಷಾ ಬಂಧನ ಹಬ್ಬವು ಅಣ್ಣ-ತಂಗಿಯರ ನಡುವಿನ ಪ್ರೀತಿ ಹಾಗೂ ಗೌರವದ ವಿಶೇಷ, ಆಳವಾದ ಬಾಂಧವ್ಯದ ಸಂಭ್ರಮಾಚರಣೆ. ಈ ಪವಿತ್ರ ದಿನದಂದು ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡೋಣ’ ಎಂದು ಉಪರಾಷ್ಟ್ರಪತಿಗಳು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.


ಮುಂಬೈನಲ್ಲಿ ಬಿಜೆಪಿ ವಿರುದ್ಧ 17 ಹೊಸ FIR ದಾಖಲು!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ