ಲಖನೌ: ಬಿಜೆಪಿಯಿಂದ ಮಾತ್ರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಸಾಧ್ಯ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಭಾನುವಾರ ನಡೆದ ಯುವ ಕುಂಭ ಕಾರ್ಯಕ್ರಮದಲ್ಲಿ ಭಾವಗಹಿಸಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಯಾರಿಂದಲೂ ಸಾಧ್ಯವಿಲ್ಲ, ಬಿಜೆಪಿಯಿಂದ ಮಾತ್ರ ಸಾಧ್ಯ ಎಂದಿದ್ದಾರೆ. ಇದಕ್ಕೆ ಅಲ್ಲಿದ್ದ ಸಭಿಕರು ಚಪ್ಪಾಳೆ ತಟ್ಟಿ, "ರಾಮಮಂದಿರ ನಿರ್ಮಾಣ ಮಾಡಿದವರಿಗೇ ಜನ ಮತ ಹಾಕಲಿದ್ದಾರೆ" ಎಂದಿದ್ದಾರೆ. 


ಇದೇ, ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ್, ಕೆಲವರು ತಮ್ಮ ಕುಲ, ಗೋತ್ರಗಳ ಬಗ್ಗೆ ಹೇಳಿಕೊಳ್ಳುತ್ತಾ ಜನತೆಯ ದಾರಿ ತಪ್ಪಿಸುತ್ತಿದ್ದಾರೆ. ಭಾರತದಲ್ಲಿ ಭಾಷೆ, ಜಾತಿ, ಪ್ರದೇಶ, ಆಹಾರ ಪದ್ಧತಿಗಳು ವಿಭಿನ್ನವಾಗಿರಬಹುದು. ಆದರೆ ಒಂದೇ ಸಂಸ್ಕೃತಿಯನ್ನು ದೇಶ ಹೊಂದಿದೆ. ಅದೇ ಹಿಂದೂ ಸಂಸ್ಕೃತಿ ಎಂದು ಹೇಳಿದರು.