ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಬಾಬು ಅವರನ್ನು ನೇಮಕ ಮಾಡಿ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು ಆದೇಶ ಹೊರಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಹಿಂದೆ ಲೋಕಸಭಾ ಚುನಾವಣೆ 2019ರ ಸಂದರ್ಭದಲ್ಲಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಡ್ಯಾನಿಶ್ ಅಲಿ ಅವರು ರಾಜೀನಾಮೆ ನೀಡಿದ ಬಳಿಕ ಈ ಸ್ಥಾನಕ್ಕೆ ಯಾರನ್ನೂ ನೇಮಕ ಮಾಡಿರಲಿಲ್ಲ. ಇದೀಗ ರಮೇಶ್ ಬಾಬು ಅವರನ್ನು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಷ್ಟ್ರೀಯ ವಕ್ತಾರರನ್ನಾಗಿ ಹೆಚ್.ಡಿ.ದೇವೇಗೌಡರು ನೇಮಕ ಮಾಡಿದ್ದಾರೆ.


[[{"fid":"179378","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಪಕ್ಷ ಸಂಘಟನೆ ಹಾಗೂ ಉಪಚುನಾವಣೆ ಹಿನ್ನೆಲೆಯಲ್ಲಿ ಬೂತ್ ಮಟ್ಟದಿಂದ ಸಂಘಟನೆಗೆ ಮುಂದಾಗಿರುವ ದೇವೇಗೌಡರು ಗುರುವಾರ ನೇಮಕಾತಿ ಆದೇಶ ಹೊರಡಿಸಿದ್ದಾರೆ. ರಮೇಶ್ ಬಾಬು ಅವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.