)
ನವದೆಹಲಿ : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB Stampede) ತಂಡದ ವಿಜಯೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದ ನಂತರ ಭಾರತೀಯ ಜನತಾ ಪಕ್ಷ ಗುರುವಾರ ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ. ಅಲ್ಲು ಅರ್ಜುನ್ ಪ್ರಕರಣದ ಹಿನ್ನೆಲೆಗೆ ಅನುಗುಣವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಬೇಕೆಂದು ಬಿಜೆಪಿ ಸಂಸದ ಸಂಬಿತ್ ಪತ್ರ ಕೂಡ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಡಿಸಿಎಂ ನಡುವಿನ ಸಮಸ್ಯೆಗಳಿಂದಾಗಿ ಈ ಘಟನೆ ಸಂಭವಿಸಿದೆ... ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯ 35000 ಎಂದು ಡಿಸಿಎಂ ಹೇಳಿದರು, ಆದರೆ ವಿಜಯೋತ್ಸವ ಮೆರವಣಿಗೆಯಲ್ಲಿ 3 ಲಕ್ಷ ಜನರು ಹಾಜರಿದ್ದರು. ಪೊಲೀಸರು ಈ ವಿಜಯೋತ್ಸವ ಮೆರವಣಿಗೆಗೆ ಅನುಮತಿ ನೀಡಲಿಲ್ಲ, ಆದರೂ ಸಂಭ್ರಮಾಚರಣೆಯನ್ನು ಏಕೆ ನಡೆಸಲಾಯಿತು? ಇದನ್ನು ನಿರ್ಧರಿಸಿದವರು ಯಾರು?" ಎಂದು ಪತ್ರಾ ಪ್ರಶ್ನೆ ಮಾಡಿದರು..
ಇದನ್ನೂ ಓದಿ:ಈ ದೇವಾಲಯಕ್ಕೆ ಭೇಟಿ ನೀಡಿದ ನಂತರವೇ ವಿರಾಟ್ ಕೊಹ್ಲಿ 18 ವರ್ಷಗಳ ಬಳಿಕ ಐಪಿಎಲ್ ಕಪ್ ಗೆದ್ದಿದ್ದು
ಅಲ್ಲದೆ, ಪತ್ರಾ ಅವರು, ಈ ಘಟನೆಯನ್ನು ನಟ ಅಲ್ಲು ಅರ್ಜುನ್ ಪ್ರಕರಣಕ್ಕೆ ಹೋಲಿಸಿ, ಈ ಕಾಲ್ತುಳಿತದ ಹೊಣೆ ಯಾರು ಹೊರಲಿದ್ದಾರೆ ಎಂದು ಪ್ರಶ್ನೆ ಮಾಡಿದರು. ಅಲ್ಲದೆ, ಅಲ್ಲು ಅರ್ಜುನ್ ಅವರನ್ನು ಬಂಧಿಸಿದಂತೆಯೇ, ಇಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗುತ್ತದೆಯೇ..?" ಪ್ರಶ್ನೆ ಮಾಡಿದರು.
ಸರ್ಕಾರ ನಿರ್ಮಿತ ದುರಂತ : ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಫೋಟೋ-ಆಪ್ ಬಯಸಿದ್ದರಿಂದ, 12 ಗಂಟೆಗಳಲ್ಲಿ ಆತುರದಿಂದ ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ಕಾರ್ಯಕ್ರಮ ಮಾಡಿದರು. ಇದರ ಫಲಿತಾಂಶವೇ.. 11 ಸಾವುಗಳು 50ಕ್ಕೂ ಹೆಚ್ಚು ಜನರು ಗಾಯ.. ಎಂದು ಪತ್ರಾ ಕಿಡಿಕಾರಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ