ಪರೀಕ್ಷೆ ವೇಳೆ ಇಂಟರ್ನೆಟ್ ಮೇಲೆ ನಿರ್ಬಂಧ, ಸರ್ಕಾರಕ್ಕೆ ವರದಿ ಕೇಳಿದ ಕಲ್ಕತ್ತಾ ಹೈಕೋರ್ಟ್

ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಗುರುವಾರ ಮಧ್ಯಾಹ್ನ 3 ಗಂಟೆಯೊಳಗೆ ಮಾಧ್ಯಮಿಕ್' (ದ್ವಿತೀಯ) ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕದ ಮೇಲೆ ವಿಧಿಸಲಾದ ನಿರ್ಬಂಧಗಳ ಬಗ್ಗೆ ಪರಿಶೀಲನಾ ಸಮಿತಿಯ ನಿರ್ಧಾರವನ್ನು ತಿಳಿಸುವಂತೆ ಸೂಚಿಸಿದೆ.

Written by - Zee Kannada News Desk | Last Updated : Mar 10, 2022, 12:29 AM IST
  • ಈ ಪ್ರಕರಣವನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
ಪರೀಕ್ಷೆ ವೇಳೆ ಇಂಟರ್ನೆಟ್ ಮೇಲೆ ನಿರ್ಬಂಧ, ಸರ್ಕಾರಕ್ಕೆ ವರದಿ ಕೇಳಿದ ಕಲ್ಕತ್ತಾ ಹೈಕೋರ್ಟ್  title=
file photo

ಕೊಲ್ಕತ್ತಾ: ಕಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಗುರುವಾರ ಮಧ್ಯಾಹ್ನ 3 ಗಂಟೆಯೊಳಗೆ ಮಾಧ್ಯಮಿಕ್' (ದ್ವಿತೀಯ) ಬೋರ್ಡ್ ಪರೀಕ್ಷೆಗಳ ಸಮಯದಲ್ಲಿ ರಾಜ್ಯದ ಕೆಲವು ಸ್ಥಳಗಳಲ್ಲಿ ಇಂಟರ್ನೆಟ್ ಸಂಪರ್ಕದ ಮೇಲೆ ವಿಧಿಸಲಾದ ನಿರ್ಬಂಧಗಳ ಬಗ್ಗೆ ಪರಿಶೀಲನಾ ಸಮಿತಿಯ ನಿರ್ಧಾರವನ್ನು ತಿಳಿಸುವಂತೆ ಸೂಚಿಸಿದೆ.

ಗುರುವಾರದಂದು ಬೆಳಗ್ಗೆ 11 ಗಂಟೆಗೆ ಪರಿಶೀಲನಾ ಸಮಿತಿ ಸಭೆ ಸೇರಲಿದೆ ಎಂದು (Calcutta High Court) ನ್ಯಾಯಾಲಯಕ್ಕೆ ತಿಳಿಸಲಾಗಿದೆ.ರಾಜ್ಯ ಸರ್ಕಾರವು ಇಂತಹ ನಿರ್ಬಂಧಗಳನ್ನು ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಆರ್ ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಗುರುವಾರದಂದು ಮಧ್ಯಾಹ್ನ 3 ಗಂಟೆಯೊಳಗೆ ಸಭೆಯಲ್ಲಿ ಚರ್ಚೆಗಳು ಮತ್ತು ನಿರ್ಧಾರಗಳ ಕುರಿತು ವರದಿಯನ್ನು ಸಲ್ಲಿಸುವಂತೆ ರಾಜ್ಯಕ್ಕೆ ಸೂಚಿಸಿತು.

ಇದನ್ನೂ ಓದಿ: ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಧಾರವಾಡ ಯುವಕನಿಗೆ ಅಭಿನಂದನೆಗಳ ಮಹಾಪೂರ

ಈ ಪ್ರಕರಣವನ್ನು ಗುರುವಾರದಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.ಪಶ್ಚಿಮ ಬಂಗಾಳ (West Bengal) ದ ಗೃಹ ಇಲಾಖೆಯು ಮಾರ್ಚ್ 3 ರಂದು ಹೊರಡಿಸಿದ ಆದೇಶದಲ್ಲಿ, 'ಮಾಧ್ಯಮಿಕ್' ಪರೀಕ್ಷೆಗಳು ಪ್ರಾರಂಭವಾದಾಗ ಮಾರ್ಚ್ 7 ರಿಂದ ನಿರ್ದಿಷ್ಟ ದಿನಾಂಕಗಳಲ್ಲಿ ನಿರ್ದಿಷ್ಟ ಬ್ಲಾಕ್‌ಗಳು ಮತ್ತು ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3.15 ರವರೆಗೆ ಇಂಟರ್ನೆಟ್ ಡೇಟಾ ಸಂಬಂಧಿತ ಸಂದೇಶಗಳ ಪ್ರಸಾರವನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.

"ಮುಂದಿನ ಕೆಲವು ದಿನಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಇಂಟರ್ನೆಟ್ ಪ್ರಸರಣ ಮತ್ತು ಇಂಟರ್ನೆಟ್ ಟೆಲಿಫೋನಿ ಮೂಲಕ ಧ್ವನಿಯನ್ನು ಬಳಸಬಹುದು ಎಂದು ಗುಪ್ತಚರ ವರದಿಗಳನ್ನು ಸ್ವೀಕರಿಸಲಾಗಿದೆ ಎಂದು ಗೃಹ ಇಲಾಖೆ ಆದೇಶ ತಿಳಿಸಿದೆ.

ಇದನ್ನೂ ಓದಿ: Araga Jnanendra : ತಮಿಳುನಾಡು ಸಚಿವರ ಮಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅಭಯ

ಪಶ್ಚಿಮ ಬಂಗಾಳ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್‌ನ ಅಧಿಕಾರಿಯ ಪ್ರಕಾರ, 2019 ಮತ್ತು 2020 ರಲ್ಲಿ ಮಾಲ್ಡಾ ಮತ್ತು ಮುರ್ಷಿದಾಬಾದ್ ಜಿಲ್ಲೆಗಳ ಕೆಲವು ಪರೀಕ್ಷಾ ಕೇಂದ್ರಗಳಿಂದ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ವರದಿಗಳ ಹಿನ್ನೆಲೆಯಲ್ಲಿ ಈ ಕ್ರಮವು ಅಗತ್ಯ ಎಂದು ಅವರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Trending News