ಕಳಸಾ-ಬಂಡೂರಿ ಯೋಜನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯಿರಿ; ಕೇಂದ್ರಕ್ಕೆ ಗೋವಾ ಸಿಎಂ

ಕರ್ನಾಟಕ ಸರ್ಕಾರ ಕೈಗೊಂಡಿರುವ ಈ ಯೋಜನೆಯು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.  

Last Updated : Oct 25, 2019, 12:48 PM IST
ಕಳಸಾ-ಬಂಡೂರಿ ಯೋಜನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯಿರಿ; ಕೇಂದ್ರಕ್ಕೆ ಗೋವಾ ಸಿಎಂ title=
Photo Courtesy: ANI

ಪಣಜಿ (ಗೋವಾ): ಕರ್ನಾಟಕದ ಕಳಸಾ-ಬಂಡೂರಿ ಯೋಜನೆಗೆ ನೀಡಿದ್ದ ಒಪ್ಪಿಗೆಯನ್ನು ಕೂಡಲೇ ಹಿಂಪಡೆಯಬೇಕೆಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಕೇಂದ್ರ ಪರಿಸರ ಇಲಾಖೆ ಸಚಿವಾಲಯಕ್ಕೆ ಒತ್ತಾಯಿಸಿದ್ದಾರೆ. 

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ: ಸಿಎಂ ಯಡಿಯೂರಪ್ಪ

"ಕರ್ನಾಟಕದ ಕಳಸಾ-ಬಂಡೂರಿ ಯೋಜನೆಗೆ ನೀಡಿದ್ದ ಒಪ್ಪಿಗೆಯನ್ನು ಕೂಡಲೇ ಹಿಂಪಡೆಯುವಂತೆ ನಾವು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದೊಂದಿಗೆ ಒತ್ತಾಯಿಸಿದ್ದೇವೆ" ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದರು. ಈ ವಿಷಯದಲ್ಲಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿಯವರ ಹಸ್ತಕ್ಷೇಪವನ್ನು ಕೋರುತ್ತದೆ ಎಂದು ಅವರು ಹೇಳಿದರು.

ಈ ಯೋಜನೆಗೆ ಕೇಂದ್ರ ಸಚಿವಾಲಯವು ಪರಿಸರ ಅನುಮತಿ ನೀಡಿಲ್ಲ. ಆದರೆ ಅರಣ್ಯ ಮತ್ತು ವನ್ಯಜೀವಿಗಳ ಅನುಮತಿ ಪಡೆಯುವಂತಹ ಕೆಲವು ಷರತ್ತುಗಳೊಂದಿಗೆ ಮುಂದುವರಿಯಲು ಒಪ್ಪಿಗೆ ನೀಡಿದೆ ಎಂದು ಸಾವಂತ್ ಪ್ರತಿಪಾದಿಸಿದರು.

"ನಾನು ಕೇಂದ್ರ ಸಚಿವ ಪ್ರಕಾಶ್ ಜಾವ್ದೇಕರ್ ​​ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಕರ್ನಾಟಕಕ್ಕೆ ನೀಡಿರುವ ಒಪ್ಪಿಗೆ ಪತ್ರವನ್ನು ತಕ್ಷಣವೇ ಹಿಂಪಡೆಯಬೇಕೆಂದು ಒತ್ತಾಯಿಸಿದ್ದೇನೆ. ಅದು ವಿಫಲವಾದರೆ ನಾವು ಅದನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಮುಂದೆ ಪ್ರಶ್ನಿಸುತ್ತೇವೆ" ಎಂದು ಸಾವಂತ್ ಹೇಳಿದರು. ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಒಪ್ಪಿಗೆ ಹಿಂಪಡೆಯಲು ಕೋರಿ ಅಧಿಕೃತ ಪತ್ರವನ್ನು ಶುಕ್ರವಾರದೊಳಗೆ ಜಾವಡೇಕರ್‌ಗೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.

"ಒಪ್ಪಿಗೆಯನ್ನು ಹಿಂಪಡೆಯದಿದ್ದಲ್ಲಿ ನಾವು ಈ ವಿಷಯದಲ್ಲಿ ಪ್ರಧಾನ ಮಂತ್ರಿಯ ಹಸ್ತಕ್ಷೇಪವನ್ನೂ ಕೋರುತ್ತೇವೆ. ಅಲ್ಲದೆ, ರಾಜ್ಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿಲ್ಲ ಎಂದು ನಾವು ಪ್ರಧಾನ ಮಂತ್ರಿಯವರ ಗಮನಕ್ಕೆ ತರುತ್ತೇವೆ." ಈ ವಿಷಯವು ಪ್ರಸ್ತುತ ಅಧೀನದಲ್ಲಿರುವ ಕಾರಣ ರಾಜ್ಯವನ್ನು ಸಂಪರ್ಕಿಸದೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇನೆ ಎಂದು ಸಾವಂತ್ ಹೇಳಿದ್ದಾರೆ.

ಈ ಯೋಜನೆಯು ರಾಜ್ಯದ ಸಸ್ಯ ಮತ್ತು ಪ್ರಾಣಿಗಳಿಗೆ ಹಾನಿ ಮಾಡುತ್ತದೆ ಎಂದು ಗೋವಾದ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕ ಸರ್ಕಾರ ಕೈಗೊಂಡಿರುವ ಈ ಯೋಜನೆಯು ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.

[With ANI Inputs]

Trending News