ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಅನಿಶ್ಚಿತತೆಯ ನಡುವೆ 10 ದಿನಗಳ ಹಿಂದೆಯಷ್ಟೇ ಹೇರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಇಂದು ಬೆಳಿಗ್ಗೆ(ನವೆಂಬರ್ 23) 05:47ಕ್ಕೆ ಹಿಂಪಡೆಯಲಾಗಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಬಗ್ಗೆ ಗೃಹ ಸಚಿವಾಲಯಕ್ಕೆ ಅಧಿಸೂಚನೆ ಹೊರಡಿಸಿದ್ದು, ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.
ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಕುಮಾರ್ ಬಳ್ಳಾ ಇಂದು ಬೆಳಿಗ್ಗೆ 5:47ಕ್ಕೆ ಅಧಿಸೂಚನೆ ಹೊರಡಿಸಿದ್ದಾರೆ.
The notification revoking President's rule in Maharashtra pic.twitter.com/JSbAIOFUE6
— ANI (@ANI) November 23, 2019
ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಬಿಜೆಪಿ-NCP ಮೈತ್ರಿ ಸರ್ಕಾರ ರಚನೆಯಾಗಿದ್ದು, ದೇವೇಂದ್ರ ಫಡ್ನವೀಸ್ ಸತತ ಎರಡನೇ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. NCP ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
#WATCH Mumbai: Devendra Fadnavis takes oath as Maharashtra Chief Minister again, oath administered by Governor Bhagat Singh Koshyari at Raj Bhawan. pic.twitter.com/kjWAlyMTci
— ANI (@ANI) November 23, 2019
#WATCH Mumbai: NCP's Ajit Pawar takes oath as Deputy CM, oath administered by Maharashtra Governor Bhagat Singh Koshyari at Raj Bhawan. pic.twitter.com/TThGy9Guyr
— ANI (@ANI) November 23, 2019
ಮಹಾರಾಷ್ಟ್ರದ ಈ ರಾಜಕೀಯ ಬೆಳವಣಿಗೆ ಕುರಿತಂತೆ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿವೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲ, ಬಿಜೆಪಿ ದೇಶದ ಪ್ರಜಾಪ್ರಭುತ್ವದ ಸುಪಾರಿ ತೆಗೆದುಕೊಂಡಿದೆ ಎಂಬುದು ಈಗ ಸಾಬೀತಾಗಿದೆ. ರಾಜ್ಯಪಾಲರು ಶಾ ಅವರ 'ಹಿಟ್ಮ್ಯಾನ್' ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
1. ರಾಷ್ಟ್ರಪತಿ ಆಡಳಿತವನ್ನು ಯಾವಾಗ ತೆಗೆದುಹಾಕಲಾಯಿತು?
2. ಹಕ್ಕು ರಾತ್ರಿಯಿಡೀ ಯಾವಾಗ ಮಂಡಿಸಲ್ಪಟ್ಟಿತು?
3. ಶಾಸಕರ ಪಟ್ಟಿಯನ್ನು ಯಾವಾಗ ಮಂಡಿಸಲಾಯಿತು?
4. ಶಾಸಕರು ಯಾವಾಗ ರಾಜ್ಯಪಾಲರ ಮುಂದೆ ಹಾಜರಾದರು?
5. ಅವರು ಕಳ್ಳರಂತೆ ಏಕೆ ಪ್ರಮಾಣ ವಚನ ಸ್ವೀಕರಿಸಿದರು? ಎಂದು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.
अब ये साबित हो गया कि भाजपा देश के लोकतंत्र की सुपारी ले चुकी है। राज्यपाल एक बार फिर शाह के ‘हिटमैन’ साबित हुए हैं।
1. राष्ट्रपति शासन कब हटा?
2. रातोंरात कब दावा पेश किया ?
3. कब विधायकों की सूची पेश की?
4. कब विधायक राज्यपाल के समक्ष पेश हुए?
5. चोरों की तरह शपथ क्यों दिलाई? pic.twitter.com/XGL5lEGnNj— Randeep Singh Surjewala (@rssurjewala) November 23, 2019
ಕರ್ನಾಟಕ ಕಾಂಗ್ರೆಸ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಬಿಜೆಪಿಯೊಂದಿಗಿದ್ದರೆ ಅಪವಿತ್ರ ಪವಿತ್ರವಾಗುತ್ತದೆ. ಅತ್ಯಂತ ಗೌಪ್ಯವಾಗಿ ಮಧ್ಯರಾತ್ರಿಯಲ್ಲೂ ರಾಷ್ಟ್ರಪತಿ ಆಳ್ವಿಕೆ ಹಿಂಪಡೆಯಲಾಗುತ್ತದೆ. ರಾಜಭವನವು ಬಿಜೆಪಿಗಾಗಿ ರಾತ್ರಿಯೆಲ್ಲಾ ಕೆಸಲ ಮಾಡುತ್ತದೆ. ರಾತ್ರೋರಾತ್ರಿ ಸಮೀಕರಣಗಳು ಬದಲಾಗಿ ಶಾಸಕರು ಪಕ್ಷಗಳು ತಮ್ಮ ನಿಲುವನ್ನು ಬದಲಾಯಿಸುತ್ತಾರೆ.
ಸ್ವಾಯತ್ತ ಸಂಸ್ಥೆಗಳು+ಬಿಜೆಪಿ =ಸರ್ಕಾರ ಎಂದು ಬರೆದಿದೆ.
ಬಿಜೆಪಿಯೊಂದಿಗಿದ್ದರೆ ಅಪವಿತ್ರ ಪವಿತ್ರವಾಗುತ್ತದೆ.
ಅತ್ಯಂತ ಗೌಪ್ಯವಾಗಿ ಮಧ್ಯರಾತ್ರಿಯಲ್ಲೂ ರಾಷ್ಟ್ರಪತಿ ಆಳ್ವಿಕೆ ಹಿಂಪಡೆಯಲಾಗುತ್ತದೆ.
ರಾಜಭವನವು @BJP4India ಗಾಗಿ ರಾತ್ರಿಯೆಲ್ಲ ಕೆಲಸ ಮಾಡುತ್ತದೆ.
ರಾತ್ರೋರಾತ್ರಿ ಸಮೀಕರಣಗಳು ಬದಲಾಗಿ ಶಾಸಕರು ಪಕ್ಷಗಳು ತಮ್ಮ ನಿಲುವನ್ನು ಬದಲಾಯಿಸುತ್ತಾರೆ.
ಸ್ವಾಯತ್ತ ಸಂಸ್ಥೆಗಳು+ಬಿಜೆಪಿ =ಸರ್ಕಾರ
— Karnataka Congress (@INCKarnataka) November 23, 2019
ಶಿವಸೇನೆ ವಕ್ತಾರ ಸಂಜಯ್ ರೌತ್ ಮಹಾರಾಷ್ಟ್ರದಲ್ಲಿ ಬಿಜೆಪಿ-NCP ಸರ್ಕಾರ ರಚನೆ ಬಗ್ಗೆ ತೀವ್ರ ವಾಗ್ಧಾಳಿ ನಡೆಸಿದ್ದು, ಅಜಿತ್ ಪವಾರ್ ರಾಜ್ಯದ ಜನತೆ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಹೇಳಿದರು.
Sanjay Raut, Shiv Sena: Sharad Pawar saheb has nothing to do with this, Ajit Pawar has backstabbed the people of Maharashtra pic.twitter.com/L5HtyMtiWf
— ANI (@ANI) November 23, 2019
#WATCH Sanjay Raut, Shiv Sena: Kal 9 baje tak ye mahashaye (Ajit Pawar) hamare saath baithe the, achanak se gayab ho gaye baad mein. Vo nazro se nazre mila kar nahi bol rahe the, jo vyakti paap karne jata hai uski nazar jaise jhukti hai, waise jhuki nazro se baat kar rahe the. pic.twitter.com/dL6olqXFK9
— ANI (@ANI) November 23, 2019