ನವದೆಹಲಿ: ತೆಲಂಗಾಣದ ಬಿಜೆಪಿ ಶಾಸಕ ರಾಜನಾಥ್ ಸಿಂಗ್ ರೊಹಿಂಗ್ಯಾ ಮತ್ತು ಬಾಂಗ್ಲಾದೇಶಿ ವಲಸೆಗಾರರ ಕುರಿತಾಗಿ ಪ್ರಸ್ತಾಪಿಸುತ್ತಾ " ಭಾರತ ದೇಶವು  ರಕ್ಷಣೆಯಾಗಬೇಕಾದರೆ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ನುಸುಳುಕೊರರನ್ನು ಗುಂಡಿಕ್ಕಿ ಕೊಲ್ಲಬೇಕು" ಎಂದು ಅವರು ತಿಳಿಸಿದರು.


COMMERCIAL BREAK
SCROLL TO CONTINUE READING

ಈ ಶಾಸಕ ರಾಜನಾಥ್ ಸಿಂಗ್ ಅವರ ಹೇಳಿಕೆಯು ಪ್ರಮುಖವಾಗಿ ಅಸ್ಸಾಮ ಸರ್ಕಾರ  ರಾಷ್ಟ್ರೀಯ ನಾಗರಿಕರ ನೋಂದಣಿ ಪಟ್ಟಿಯನ್ನು ಬಿಡುಗಡೆಯ ಕುರಿತು ಪ್ರತಿಪಕ್ಷ ಮತ್ತು ಆಡಳಿತ ಪಕ್ಷಗಳ ನಡುವೆ ನಡೆಯುತ್ತಿರುವ ವಿರೋಧದ ಹಿನ್ನಲೆಯಲ್ಲಿ ಬಂದಿದೆ. ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು " ಒಂದು ವೇಳೆ ರೋಹಿಂಗ್ಯಾ ಮತ್ತು ಬಾಂಗ್ಲಾದೇಶಿ ಅಕ್ರಮ ವಲಸೆಗಾರರ  ಭಾರತದಿಂದ ತೊಲಗದಿದ್ದಲ್ಲಿ  ಅವರನ್ನು ಗುಂಡಿಕ್ಕಿ ನಾಶಗೊಳಿಸಬೇಕು ಎಂದು ಅವರು ತಿಳಿಸಿದರು.


ಇನ್ನೊಂದೆಡೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಪ್ರತಿಪಕ್ಷಗಳು ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸುವುದಕ್ಕೆ ಕಿಡಿಕಾರಿದರು.