ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿದ ಸಿಎಂ..!

ಪಕ್ಕದ ರಾಜ್ಯಗಳಲ್ಲಿ ಭೀಕರ ಮಳೆಯಾಗುತ್ತಿದ್ದು, ಜನರು ಪರದಾಡುತ್ತಿದ್ದಾರೆ. ಅಧಿಕಾರಿಗಳು ಸಹ ಕಾಲಕಾಲಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೆ ಸುರಕ್ಷಿತ ಕ್ರಮವಾಗಿ ನಾಳೆ ಆಂಧ್ರಪ್ರದೇಶ ರಾಜ್ಯದಾದ್ಯಂತ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿ ಸಿಎಂ ಚಂದ್ರಬಾಬು ಆದೇಶ ಹೊರಡಿಸಿದ್ದಾರೆ.

Written by - Krishna N K | Last Updated : Sep 1, 2024, 07:08 PM IST
    • ಪಕ್ಕದ ರಾಜ್ಯಗಳಲ್ಲಿ ಭೀಕರ ಮಳೆಯಾಗುತ್ತಿದ್ದು, ಜನರು ಪರದಾಡುತ್ತಿದ್ದಾರೆ.
    • ನಾಳೆ ಆಂಧ್ರಪ್ರದೇಶ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    • ಅಂಗನವಾಡಿಗಳಿಗೂ ರಜೆ ಘೋಷಿಸಿ ಸಿಎಂ ಚಂದ್ರಬಾಬು ಅವರು ಆದೇಶ ನೀಡಿದ್ದಾರೆ.
ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿದ ಸಿಎಂ..! title=

ಆಂಧ್ರಪ್ರದೇಶ : ಉತ್ತರ ಆಂಧ್ರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ವಿಶಾಖಪಟ್ಟಣದಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಿ ಸಿಎಂ ಚಂದ್ರಬಾಬು ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಗುಂಟೂರು ಮತ್ತು ಕೃಷ್ಣಾ ಜಿಲ್ಲೆಗಳಲ್ಲಿ 37 ಸೆಂ.ಮೀ ಅಸಹಜ ಮಳೆ ಬಿದ್ದಿರುವುದು 9 ಮಂದಿ ಸಾವನ್ನಪ್ಪಿರುವುದು ಬೇಸರದ ಸಂಗತಿ ಎಂದರು. ಅಲ್ಲದೆ, ಭಾರೀ ಮಳೆಯ ಹಿನ್ನೆಲೆಯಲ್ಲಿ ಜನರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಪೂರ್ವ ಗೋದಾವರಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಇದಲ್ಲದೆ, ಮಳೆಯ ಕಾರಣ ಪೂರ್ವ ಗೋದಾವರಿ ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ ಸೋಮವಾರ 2 ರಂದು ರಜೆ ಘೋಷಿಸಲಾಗಿದೆ.   

ಇದನ್ನೂ ಓದಿ:ಬರ್ಬರವಾಗಿ ಹೆತ್ತ ತಾಯಿಯನ್ನು ಕೊಂದು “Miss You Amma” ಅಂತ ಫೊಟೋ ಸ್ಟೇಟಸ್‌ ಹಾಕಿದ ಮಗ..!

ಮುಂದಿನ 24 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಆಂಧ್ರ ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ವಿಜಯವಾಡದಲ್ಲೂ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಅಸ್ತವ್ಯಸ್ತವಾಗಿವೆ.  

ಭಾರೀ ಮಳೆಯಿಂದಾಗಿ ವಿಶಾಖಪಟ್ಟಣ ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಾಗಲೇ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳು, ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಿದ್ದಾರೆ. ಎನ್ ಟಿಆರ್ ಜಿಲ್ಲೆಯಲ್ಲೂ ಭಾರಿ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.  

ಇದನ್ನೂ ಓದಿ:ಅಂಬಾನಿಯ ʻಅಂಟಿಲಿಯಾʼನಿರ್ಮಿಸಲು ಎಷ್ಟು ವರ್ಷ ಬೇಕಾಯಿತು ಗೊತ್ತಾ? ಇದರ ಬೆಲೆ ಕೇಳಿದ್ರೆ ನೀವು ಶಾಕ್‌ ಆಗೋದು ಖಂಡಿತ!

ಈ ಜಿಲ್ಲೆಗಳಲ್ಲಿ ಮಾತ್ರವಲ್ಲದೆ ಗುಂಟೂರು, ಎನ್‌ಟಿಆರ್, ಕಾಕಿನಾಡ, ಕೃಷ್ಣ, ಅಲ್ಲೂರಿ ಮತ್ತು ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿಯೂ ಸೋಮವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೆಲಂಗಾಣದಾದ್ಯಂತ ಈಗಾಗಲೇ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News