ಶಿರಡಿಗೆ ಹೋಗುವ ಭಕ್ತರಿಗೆ ಎಚ್ಚರಿಕೆ..! ಇನ್ನು ಮುಂದೆ ದೇವಸ್ಥಾನದೊಳಗೆ ಈ ವಸ್ತುಗಳನ್ನ ತೆಗೆದುಕೊಂಡು ಹೋಗುವಂತಿಲ್ಲ..

Shirdi Sai baba temple : ಭಾರತ ಮತ್ತು ಪಾಕಿಸ್ತಾನದ ಯುದ್ಧ ವಿರಾಮದ ನಡುವೆಯೂ ದೇಶದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆಯಾ ಪ್ರದೇಶಗಳಲ್ಲಿನ ಪ್ರಸಿದ್ಧ ದೇವಾಲಯಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Krishna N K | Last Updated : May 12, 2025, 02:27 AM IST
    • ಯುದ್ಧ ವಿರಾಮದ ನಡುವೆಯೂ ದೇಶದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ
    • ಆಯಾ ಪ್ರದೇಶಗಳಲ್ಲಿನ ಪ್ರಸಿದ್ಧ ದೇವಾಲಯಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
    • ಶಿರಡಿ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.
ಶಿರಡಿಗೆ ಹೋಗುವ ಭಕ್ತರಿಗೆ ಎಚ್ಚರಿಕೆ..! ಇನ್ನು ಮುಂದೆ ದೇವಸ್ಥಾನದೊಳಗೆ ಈ ವಸ್ತುಗಳನ್ನ ತೆಗೆದುಕೊಂಡು ಹೋಗುವಂತಿಲ್ಲ..

IND PAK war effects : ಶಿರಡಿಯಲ್ಲಿರುವ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಹೂಮಾಲೆ, ಹೂಗುಚ್ಛ ಮತ್ತು ಶಾಲುಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಶಿರಡಿಯಲ್ಲಿರುವ ಈ ಬಾಬಾ ದೇವಸ್ಥಾನಕ್ಕೆ ದೇಶಾದ್ಯಂತ ಮತ್ತು ವಿದೇಶಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಇಲ್ಲಿಗೆ ಬರುವ ಭಕ್ತರ ಸುರಕ್ಷತೆಗಾಗಿ ಈ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಮೂಲಗಳು ತಿಳಿಸಿವೆ. 

ಇನ್ನು ಮುಂದೆ ದೇವಸ್ಥಾನಕ್ಕೆ ಬರುವ ಭಕ್ತರನ್ನು ಸಂಪೂರ್ಣ ತಪಾಸಣೆ ನಡೆಸಿದ ನಂತರವೇ ದೇವಸ್ಥಾನದೊಳಗೆ ಬಿಡಲಾಗುವುದು. ಈ ನಿರ್ಬಂಧಗಳು ಎಷ್ಟು ಕಾಲ ಮುಂದುವರಿಯುತ್ತವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಲ್ಲದೆ, ಕಳೆದ ವಾರ ದೇವಾಲಯಕ್ಕೆ ಬೆದರಿಕೆ ಇಮೇಲ್ ಬಂದಿತ್ತು.. ಇದರಿಂದ ಎಚ್ಚೆತ್ತ ಸಿಬ್ಬಂದಿ ದೇವಾಲಯದಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಇದನ್ನೂ ಓದಿ:ಪಾಕ್‌ ಹಾಕಿದ 3000 ಬಾಂಬ್‌ಗಳಿಗೆ ಈ ದೇವಾಲಯದ ಒಂದೇ ಒಂದು ಇಟ್ಟಿಗೆ ಕೂಡ ಅಲ್ಲಾಡಲಿಲ್ಲ..! ಭಾರತದ ಗಡಿಯಲ್ಲಿದೆ 'ಆ' ನಿಗೂಢ ದೇಗುಲ

ಈ ನಿಟ್ಟಿನಲ್ಲಿ, ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸುರಕ್ಷತೆಯ ದೃಷ್ಟಿಯಿಂದ, ದೇವಸ್ಥಾನದೊಳಗೆ ಹೂಮಾಲೆಗಳು, ಹೂವುಗಳು ಮತ್ತು ಶಾಲುಗಳನ್ನು ತೆಗೆದುಕೊಂಡು ಹೋಗುವುದನ್ನು ದೇವಸ್ಥಾನದ ಟ್ರಸ್ಟ್ ನಿಷೇಧಿಸಿದೆ. ನಿರ್ಬಂಧಗಳ ಕುರಿತು ಮಾತನಾಡಿದ ಸಾಯಿಬಾಬಾ ಸಂಸ್ಥಾನ ಟ್ರಸ್ಟ್ ಸದಸ್ಯ ಗಡಿಲ್ಕರ್, ದೇವಾಲಯಕ್ಕೆ ಬರುವ ಭಕ್ತರನ್ನು ಪರೀಕ್ಷಿಸಿ ನಂತರ ಒಳಗೆ ಬಿಡಲಾಗುವುದು ಎಂದು ಹೇಳಿದರು. ಈ ತಿಂಗಳ 2 ರಂದು ದೇವಾಲಯದ ಟ್ರಸ್ಟ್‌ಗೆ ಬೆದರಿಕೆ ಇ-ಮೇಲ್ ಬಂದಿದೆ ಎಂದು ಅವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

Trending News