ಉದಯಪುರ: ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಟೈಲರಿಂಗ್ ಕೆಲಸ ಮಾಡಿಕೊಂಡಿದ್ದ ಕನ್ನಯ್ಯ ಲಾಲ್ ಎಂತಾನನನ್ನು ದುಷ್ಕರ್ಮಿಗಳು ಶಿರಚ್ಛೇದ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೂ ಬೆದರಿಕೆ ಹಾಕದ್ದಾರೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಬಟ್ಟೆ ಶಾಪ್ ಇಟ್ಟುಕೊಂಡಿದ್ದ ಕನ್ನಯ್ಯ ಲಾಲ್ ಎಂಬಾತನ ಬಳಿ ಬಂದ ದುಷ್ಕರ್ಮಿಗಳು ಬಟ್ಟೆ ಹೊಲಿಯಲು ಅಳತೆ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಈ ವೇಳೆ ಏಕಾಏಕಿ ಆತನ ಮೇಲೆ ಕತ್ತಿಯಿಂದ ದಾಳಿ ನಡೆಸಿ ಶಿರಚ್ಛೇದ ಮಾಡಿದ್ದಾರೆ. ಬಳಿಕ ಕತ್ತಿ ಝಳಪಿಸಿ ಎಚ್ಚರಿಕೆ ಸಂದೇಶ ನೀಡಿದ್ದು, ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.


ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ : IMD ಎಚ್ಚರಿಕೆ


ಪ್ರಧಾನಿ ಮೋದಿಗೆ ಬೆದರಿಕೆ


ಗುವಾಹಟಿ ಐಷಾರಾಮಿ ಹೋಟೆಲ್‌ನಲ್ಲಿ ʼಲುಡೋʼ ಆಡ್ತಿದ್ದಾರಂತೆ ಬಂಡಾಯ ಶಾಸಕರು!


ಘಟನೆ ಖಂಡಿಸಿ ಉದಯ್‌ಪುರದಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದೆ. ರಾಜಸ್ಥಾನ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರವಾದಿ ಮಹಮ್ಮದ್ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದ ನೂಪುರ್ ಶರ್ಮಾಗೆ ಕನ್ನಯ್ ಲಾಲ್ ಬೆಂಬಲ ಸೂಚಿಸಿದ್ದ. ನೂಪುರ್‍ಗೆ ಬೆಂಬಲ ಸೂಚಿಸಿದ್ದ ಆತ ಹಾಕಿದ್ದ ಪೋಸ್ಟ್‍ನಿಂದ ಕೆರಳಿದ್ದ ಆರೋಪಿಗಳು ಬಟ್ಟೆ ಅಂಗಡಿಗೆ ನುಗ್ಗಿ ಬರ್ಬರ ಹತ್ಯೆ ಮಾಡಿದ್ದಾರೆ.


ಇನ್ನು ಕನ್ನಯ್ ಲಾಲ್ ಕೊಲೆ ಖಂಡಿಸಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಇಂತಹ ಬೆದರಿಕೆ ಹಾಗೂ ಕೊಲೆಗಡುಕರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ