Snake Bite Death: ಹಾವು ಕಡಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ!

ದೇಶದ ಹಲವು ರಾಜ್ಯಗಳಲ್ಲಿ ಹಾವು ಕಡಿತದಿಂದ ಮೃತಪಟ್ಟ ನಂತರ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಮೃತರ ಕುಟುಂಬ ಸದಸ್ಯರಿಗೆ ಆದಷ್ಟು ಬೇಗ ಆರ್ಥಿಕ ನೆರವು ನೀಡುವ ಮೂಲಕ ಅವರ ದುಃಖದ ಸಮಯದಲ್ಲಿ ಸಹಾಯ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಿಂದ ಮೃತರ ಕುಟುಂಬವು ಅಪಘಾತದಿಂದ ಚೇತರಿಸಿಕೊಳ್ಳಲು ಆರ್ಥಿಕ ಸಹಾಯವನ್ನು ಪಡೆಯುತ್ತದೆ.

Written by - Puttaraj K Alur | Last Updated : Aug 12, 2023, 03:34 PM IST
  • ದೇಶದ ಹಲವು ರಾಜ್ಯಗಳಲ್ಲಿ ಹಾವು ಕಡಿತದಿಂದ ಮೃತಪಟ್ಟ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ
  • ಮೃತರ ಕುಟುಂಬಸ್ಥರಿಗೆ ಆರ್ಥಿಕ ನೆರವಿನ ಮೂಲಕ ಸಹಾಯ ಮಾಡುವುದು ಈ ಯೋಜನೆಯ ಉದ್ದೇಶ
  • ಇದರಿಂದ ಮೃತರ ಕುಟುಂಬ ಆಘಾತದಿಂದ ಚೇತರಿಸಿಕೊಳ್ಳಲು ಆರ್ಥಿಕ ಸಹಾಯವನ್ನು ಪಡೆಯುತ್ತದೆ
Snake Bite Death: ಹಾವು ಕಡಿತದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ!   title=
ಹಾವು ಕಡಿತಕ್ಕೆ ಪರಿಹಾರ

ನವದೆಹಲಿ: ಪ್ರತಿ ವರ್ಷ ಭಾರತದಲ್ಲಿ ಹಾವು ಕಡಿತದಿಂದ ಅನೇಕ ಜನರು ಸಾಯುತ್ತಾರೆ. ದೇಶದ ಹಲವು ರಾಜ್ಯಗಳಲ್ಲಿ ಹಾವು ಕಡಿತದಿಂದ ಸಾವಿಗೀಡಾದವರಿಗೆ ಪರಿಹಾರ ನೀಡುವ ವ್ಯವಸ್ಥೆ ಇದೆ. ಕೆಲವು ರಾಜ್ಯಗಳಲ್ಲಿ ಹಾವು ಕಡಿತದಿಂದ ಸಾವು ಸಂಭವಿಸಿದರೆ ಅದನ್ನು ವಿಪತ್ತು ಸಾವುಗಳು ಎಂದು ಪರಿಗಣಿಸಲಾಗುತ್ತದೆ. ಇದರಿಂದಾಗಿ ಹಾವು ಕಡಿತದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಹಾವು ಕಡಿತದಿಂದ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಉತ್ತರ ಪ್ರದೇಶದಲ್ಲಿ 4 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅನೇಕರಿಗೆ ಇದರ ಬಗ್ಗೆ ಅರಿವಿಲ್ಲ.

48 ಗಂಟೆಗಳಲ್ಲಿ 4 ಲಕ್ಷ ಪರಿಹಾರ

ಉತ್ತರಪ್ರದೇಶದಲ್ಲಿ ಹಾವು ಕಡಿತದಿಂದ ಸಂಭವಿಸಿದ ಸಾವನ್ನು ವಿಪತ್ತು ಎಂದು  ಪರಿಗಣಿಸಲಾಗಿದೆ. ರಾಜ್ಯ ಸರ್ಕಾರದ ನಿಯಮಗಳ ಪ್ರಕಾರ 48 ಗಂಟೆಗಳಲ್ಲಿ ಎಲ್ಲಾ ಕ್ರಮಗಳನ್ನು ಪೂರ್ಣಗೊಳಿಸಿ, ಪರಿಹಾರದ ಮೊತ್ತವನ್ನು ಸಾವನ್ನಪ್ಪಿದವರ ಕುಟುಂಬಸ್ಥರ ಖಾತೆಗೆ ಕಳುಹಿಸಬೇಕು. ಪರಿಹಾರದ ಮೊತ್ತವನ್ನು ಪಡೆಯಲು ಮೃತರ ಸಂಬಂಧಿಕರು 2 ಪ್ರಮುಖ ಕೆಲಸಗಳನ್ನು ಮಾತ್ರ ಮಾಡಬೇಕು, ನಂತರದ ಎಲ್ಲಾ ಜವಾಬ್ದಾರಿ ಜಿಲ್ಲಾಡಳಿತದ ಮೇಲಿರುತ್ತದೆ.

ಇದನ್ನೂ ಓದಿ: ʻಇಂದಿರಾ ಗಾಂಧಿ ಸ್ಮಾರ್ಟ್‌ಫೋನ್ʼ ಯೋಜನೆ

ಹಾವು ಕಡಿತದಿಂದ ಯಾರಾದರೂ ಸಾವನ್ನಪ್ಪಿದ್ದರೆ, ಮೊದಲು ಮೃತರ ಸಂಬಂಧಿಕರು ಘಟನೆ ಬಗ್ಗೆ ಲೇಖಪಾಲ್ ಅವರಿಗೆ ತಿಳಿಸಬೇಕು. ಮತ್ತೊಂದೆಡೆ ಬಲಿಪಶುವನ್ನು ಮರಣೋತ್ತರ ಪರೀಕ್ಷೆಗೆ ಕರೆದೊಯ್ದು ಅದರ ವರದಿಯನ್ನು ನೀಡಬೇಕು. ಅದರಲ್ಲಿ ಹಾವು ಕಡಿತದಿಂದ ಸಾವು ಸಂಭವಿಸಿರುವುದು ದೃಢೀಕರಿಸಲ್ಪಟ್ಟಿರಬೇಕು. ನಂತರ ಈ ವರದಿಯನ್ನು ಸ್ಥಳೀಯ ಲೆಕ್ಕಪರಿಶೋಧಕರಿಗೆ ನೀಡಬೇಕು. ಬಳಿಕ ವಿಷಯ ಲೆಖ್ಪಾಲ್, ಕನುಂಗೋ, ತಹಸೀಲ್ದಾರ್ ಮೂಲಕ ಎಡಿಎಂ ಕಚೇರಿಗೆ ತಲುಪುತ್ತದೆ. ಮಾಹಿತಿಯನ್ನು ಪರಿಶೀಲಿಸಿದ ನಂತರ ಪರಿಹಾರದ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತದೆ.

ಭಾರತದಲ್ಲಿ ಪ್ರತಿವರ್ಷ ಸಾವಿರಾರು ಸಾವುಗಳು!

ಒಂದು ಅಧ್ಯಯನದ ಪ್ರಕಾರ ಭಾರತದಲ್ಲಿ ವಾರ್ಷಿಕವಾಗಿ 64 ಸಾವಿರ ಜನರು ಹಾವು ಕಡಿತದಿಂದ ಸಾಯುತ್ತಾರೆ. ಈ ಪೈಕಿ ಹೆಚ್ಚಿನ ಸಾವುಗಳು ಗ್ರಾಮೀಣ ಪ್ರದೇಶದಲ್ಲಿ ಸಂಭವಿಸಿವೆ. ಹಾವು ಕಡಿತದಿಂದ ಮಹಿಳೆಯರಿಗಿಂತ ಪುರುಷರು ಹೆಚ್ಚು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ 5 ಲಕ್ಷ ರೂ. ಪರಿಹಾರದ ಅವಕಾಶವಿದೆ. ಕೇರಳದಲ್ಲಿ ವಿಷಕಾರಿ ನೊಣ ಕಡಿತದಿಂದ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಲಾಗಿದೆ. ಆದರೆ ಈ ಸಹಾಯ ಯೋಜನೆಯ ದುರ್ಬಳಕೆಯ ಕೆಲವು ಪ್ರಕರಣಗಳೂ ಕೆಲವೆಡೆ ಮುನ್ನೆಲೆಗೆ ಬಂದಿವೆ.

ಇದನ್ನೂ ಓದಿ: ಇನ್ಮುಂದೆ ಸುಪ್ರೀಂ ಕೋರ್ಟ್‌ ಪ್ರವೇಶಕ್ಕೆ ಇ ಪಾಸ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News