ಅಲಿಗಢ: ಸಮಾಜವಾದಿ ಪಕ್ಷದ ಮುಖಂಡ ರಾಕೇಶ್ ಯಾದವ್ ಅವರನ್ನು ಮಂಗಳವಾರದ ತಡ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. 


COMMERCIAL BREAK
SCROLL TO CONTINUE READING

ಪ್ರಾಪರ್ಟಿ ಡೀಲರ್ ಆಗಿದ್ದ ರಾಕೇಶ್ ಯಾದವ್, ಬರೋಲಿ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಉಸ್ತುವಾರಿಯೂ ಆಗಿದ್ದರು. ಆದರೆ, ಮಂಗಳವಾರ ತಡರಾತ್ರಿ ಅಹಿರ್ ಪಾಡಾ ಪ್ರದೇಶದಲ್ಲಿದ್ದ ತನ್ನ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. 



ಸದ್ಯ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ಕುಲ್ಹರಿ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. 


ಮೇಲ್ನೋಟಕ್ಕೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದಿದೆ ಎನ್ನಲಾಗಿದೆ. ತನಿಖೆ ಪ್ರಗತಿಯಲ್ಲಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ.