ಉತ್ತರಪ್ರದೇಶ : ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ಭೀಕರ ಅವಘಡ ಸಂಭವಿಸಿದೆ.ರತಿಭಾನ್‌ಪುರದ ಸತ್ಸಂಗದ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಿಂದ 27 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 25 ಮಹಿಳೆಯರು ಮತ್ತು 2 ಪುರುಷರು ಸೇರಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  


COMMERCIAL BREAK
SCROLL TO CONTINUE READING

ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲು ಉಂಟಾಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.ಪ್ರವಚನದಲ್ಲಿ ಪಾಲ್ಗೊಳ್ಳಲು ಬಂದಿದ್ದ ನೂರಾರು ಭಕ್ತರು ಬಿಸಿಲಿನ ತಾಪಕ್ಕೆ ಮೂರ್ಛೆ ಹೋಗಿದ್ದಾರೆ.  ಮಾಹಿತಿ ಪಡೆದ ಪೊಲೀಸರು ಮತ್ತು ಆಡಳಿತ ಮಂಡಳಿ ನೂರಾರು ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 


ಇದನ್ನೂ ಓದಿ : ಇಂದು ಸಂಸತ್‌ನಲ್ಲಿ ವಿಪಕ್ಷಗಳ ಟೀಕೆಗಳಿಗೆ ಉತ್ತರ ನೀಡಲಿರುವ ಮೋದಿ


ಪ್ರತ್ಯಕ್ಷದರ್ಶಿ ಹೇಳಿದ್ದೇನು ? :
"ನಾವು ಸತ್ಸಂಗಕ್ಕೆ ಹೋಗಿದ್ದೆವು,ಅಲ್ಲಿ ಸಾಕಷ್ಟು ಜನ ಸೇರಿದ್ದರು. ರಸ್ತೆ ಸಂಪೂರ್ಣವಾಗಿ ಜಾಮ್ ಆಗಿತ್ತು.ಹೊರಗೆ ಹೋಗಲು ಸ್ಥಳವಿರಲಿಲ್ಲ. ಆದರೆ  ಜನದಟ್ಟಣೆ ಹೆಚ್ಚಾಗುತಿದ್ದ ಹಾಗೆ ನಾನು ಮತ್ತು ನನ್ನ ತಾಯಿ ಅಲ್ಲಿಂದ ಹೊರಟೆವು.ಜಾಗದ ಕೊರತೆಯಿಂದಾಗಿ, ಜನ ಸತ್ಸಂಗದಿಂದ ಹೊರಬರಲು ಪ್ರಯತ್ನಿಸುತ್ತಿದ್ದಾಗ ಅವಘಡ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿ ಜ್ಯೋತಿ ಎನ್ನುವವರು ತಿಳಿಸಿದ್ದಾರೆ.  


27 ಮಂದಿ ಮೃತಪಟ್ಟಿರುವುದನ್ನು ದೃಢಪಡಿಸಿದ ಸರ್ಕಾರ : 
ಸತ್ಸಂಗದ ವೇಳೆ ನಡೆದ ಅಪಘಾತದಲ್ಲಿ 27 ಮಂದಿ ಮೃತಪಟ್ಟಿದ್ದಾರೆ ಎನ್ನುವುದನ್ನು ಸಿಎಂಒ ಎತಾಹ್ ದೃಢಪಡಿಸಿದ್ದಾರೆ.ಅಲ್ಲದೆ ಮೃತರ ಮರಣೋತ್ತರ ಪರೀಕ್ಷೆ ನಡೆಸುವುದಾಗಿಯೂ ಹೇಳಿದೆ. 


ಇದನ್ನೂ ಓದಿ : RBI ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅರ್ನಾಬ್ ಕುಮಾರ್ ಚೌಧುರಿ ನೇಮಕ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.