ಮದರಸಾ ಮತ್ತು ಮಸೀದಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮ : 10 ಮದರಸಾಗಳಿಗೆ ಬೀಗ

ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತಿದ್ದ 10 ಕ್ಕೂ ಹೆಚ್ಚು ಮದರಸಾಗಳಿಗೆ ಉತ್ತರಪ್ರದೇಶದಲ್ಲಿ ಬೀಗ ಹಾಕಲಾಗಿದೆ. ಅಲ್ಲದೆ ಅಕ್ರಮವಾಗಿ ತಲೆ ಎತ್ತಿದ್ದ ಮಸೀದಿಗಳನ್ನು ಕೂಡಾ ಕೆಡವಲಾಗಿದೆ.   

Written by - Ranjitha R K | Last Updated : Apr 28, 2025, 03:50 PM IST
  • 10 ಮದರಸಾಗಳಿಗೆ ಬೀಗ ಜಡಿಯಲಾಗಿದೆ.
  • ಒಂದು ಮದರಸಾ ಮತ್ತು ಅದಕ್ಕೆ ಹೊಂದಿಕೊಂಡ ಮಸೀದಿ ನೆಲಸಮ
  • ಮದರಸಾಗಳಲ್ಲಿ ಓದುತ್ತಿರುವ ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲು
ಮದರಸಾ ಮತ್ತು ಮಸೀದಿಗಳ ವಿರುದ್ದ ಕಟ್ಟು ನಿಟ್ಟಿನ ಕ್ರಮ : 10 ಮದರಸಾಗಳಿಗೆ ಬೀಗ

ಉತ್ತರ ಪ್ರದೇಶದಲ್ಲಿ ಮದರಸಾಗಳ ವಿರುದ್ಧ ತೆಗೆದುಕೊಳ್ಳಲಾಗುತ್ತಿರುವ ಕ್ರಮದ ಭಾಗವಾಗಿ, ಸೋಮವಾರ, ಶ್ರಾವಸ್ತಿ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದೆ ಎಂದು ಹೇಳಲಾದ 10 ಮದರಸಾಗಳಿಗೆ ಬೀಗ ಜಡಿಯಲಾಗಿದೆ. ಲಖಿಂಪುರ ಖೇರಿ ಜಿಲ್ಲೆಯಲ್ಲಿ ಒಂದು ಮದರಸಾ ಮತ್ತು ಅದಕ್ಕೆ ಹೊಂದಿಕೊಂಡ ಮಸೀದಿಯನ್ನು ಬುಲ್ಡೋಜರ್ ಬಳಸಿ ಕೆಡವಲಾಯಿತು.

Add Zee News as a Preferred Source

ಕಳೆದ ಎರಡು ದಿನಗಳಲ್ಲಿ ಶ್ರಾವಸ್ತಿ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ 10 ಅಕ್ರಮ ಮದರಸಾಗಳನ್ನು ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಸೀಲ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಜಂಟಿ ತಂಡವು ಮೊಹರು ಮಾಡಿದ ಮದರಸಾಗಳು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದವು. ಪ್ರಸ್ತುತ, ಮದರಸಾಗಳಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಲಾಗುವುದು. 

ಇದನ್ನೂ ಓದಿ : ಪಾಕ್ ಮೇಲೆ ಭಾರತದ ದೊಡ್ಡ ಡಿಜಿಟಲ್ ಮುಷ್ಕರ! 16 ಚಾನೆಲ್‌ಗಳ ಮೇಲೆ ನಿರ್ಬಂಧ... ಶೋಯೆಬ್ ಅಖ್ತರ್ ಅಕೌಂಟ್‌ ಕೂಡ ಬ್ಲಾಕ್‌

ಮತ್ತೊಂದೆಡೆ, ಲಖಿಂಪುರ ಖೇರಿ ಜಿಲ್ಲೆಯಲ್ಲಿ ಬುಲ್ಡೋಜರ್‌ಗಳನ್ನು ಬಳಸಿ ಮದರಸಾ ಮತ್ತು ಮಸೀದಿಯನ್ನು ಕೆಡವಲಾಯಿತು. ಈ ಮದರಸಾ ಮತ್ತು ಮಸೀದಿ ನೇಪಾಳ ಗಡಿಯಲ್ಲಿರುವ ಕೃಷ್ಣನಗರ ಗ್ರಾಮದಲ್ಲಿತ್ತು. ಮದರಸಾ ಮತ್ತು ಮಸೀದಿ ಎರಡನ್ನೂ ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂಬ ಆರೋಪವಿದೆ. ಇದಕ್ಕೂ ಮುಂಚೆಯೇ, 2023 ರಲ್ಲಿ, ಆಡಳಿತವು ಇಲ್ಲಿ ಅಕ್ರಮವಾಗಿ ನಿರ್ಮಿಸಲಾದ ಮಸೀದಿ ಮತ್ತು ಮದರಸಾವನ್ನು ಕೆಡವಿತ್ತು. ಆದರೆ ಜನರು ಮತ್ತೆ ಅದೇ ಸ್ಥಳದಲ್ಲಿ ಮಸೀದಿ ಮತ್ತು ಮದರಸಾವನ್ನು ನಿರ್ಮಿಸಿದ್ದರು. ಸೋಮವಾರ ಜಿಲ್ಲಾಡಳಿತ ಮತ್ತು ತಹಸಿಲ್ ಆಡಳಿತವು ಭಾರೀ ಪೊಲೀಸ್ ಪಡೆಯ ಸಮ್ಮುಖದಲ್ಲಿ ಈ ಅಕ್ರಮ ನಿರ್ಮಾಣ ತೆರವು ಕಾರ್ಯಾಚರಣೆ ನಡೆಸಿತು.  ಸರ್ಕಾರದ ಈ ಕ್ರಮಕ್ಕೆ ಯಾವುದೇ ವಿರೋಧ ವ್ಯಕ್ತವಾಗಿಲ್ಲ ಎನ್ನಲಾಗಿದೆ.  

ಕಾನೂನು ಪ್ರಕಾರ ಕಾರ್ಯ ನಿರ್ವಹಿಸುತ್ತಿತುವ ಮದರಸಾಗಳು ಭಯಪಡುವ ಅಗತ್ಯವಿಲ್ಲ: 
ಈ ಮಧ್ಯೆ, ಕಾನೂನುಬಾಹಿರವಾಗಿರುವ ಮದರಸಾಗಳ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗುತ್ತಿದೆ, ಕಾನನೂನು ಪ್ರಕಾರ ಕಾರ್ಯ ನಿರ್ವಹಿಸುತ್ತಿರುವ ಮದರಸಾಗಳು ಭಯಪಡುವ ಅಗತ್ಯವಿಲ್ಲ ಎಂದು ಉತ್ತರ ಪ್ರದೇಶದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಓಂ ಪ್ರಕಾಶ್ ರಾಜ್‌ಭರ್ ಹೇಳಿದ್ದಾರೆ. ಭದ್ರತಾ ದೃಷ್ಟಿಕೋನದಿಂದ ಅಕ್ರಮ ಮದರಸಾಗಳು ಒಳ್ಳೆಯದಲ್ಲ ಎಂದು ರಾಜ್‌ಭರ್ ಹೇಳಿದರು. ಅಕ್ರಮ ಮದರಸಾಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಪುರಾವೆಗಳು ಕಂಡುಬಂದಿರುವ ಅನೇಕ ಪ್ರಕರಣಗಳು ಈ ಹಿಂದೆ ಬೆಳಕಿಗೆ ಬಂದಿವೆ. 

ಇದನ್ನೂ ಓದಿ : 78 ವರ್ಷಗಳ ಹಿಂದೆ ಭಾರತ- ಪಾಕ್ ಗಡಿ ನಿರ್ಧಾರವಾದದ್ದು ಹೇಗೆ? ಕೇವಲ ಇಬ್ಬರು ಅಧಿಕಾರಿಗಳೇ ನಿರ್ಧರಿಸಿ ಬಿಟ್ಟರೇ ಅಟಾರಿ ಬಾಗಾ ಬಾರ್ಡರ್

ದೂರುಗಳು ಬರುತ್ತಿರುವ ಮದರಸಾಗಳ ವಿರುದ್ಧ ನಾವು ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಉತ್ತರ ಪ್ರದೇಶ ಸರ್ಕಾರದ ಸಚಿವ ಡ್ಯಾನಿಶ್ ಆಜಾದ್ ಹೇಳಿದ್ದಾರೆ. ಮಾನದಂಡಗಳನ್ನು ಪಾಲಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.  

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News