Supreme Court: ಧರ್ಮ ಅಥವಾ ಕೋಮುವಾದದ ಆಧಾರದ ಮೇಲೆ ಉದ್ರೇಕಕಾರಿ ಹೇಳಿಕೆಗಳನ್ನು ನೀಡುವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಹೇಳಿಕೆ ನೀಡಿದೆ. ಕೋಮುವಾದದ ಆಧಾರದ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡುವವರು ಯಾವುದೇ ಧರ್ಮಕ್ಕೆ ಸೇರಿದವರಾಗಿದ್ದರೂ ಅವರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಾಲಯ ಹೇಳಿದೆ. ಇಂತಹ ಪ್ರಕರಣಗಳಲ್ಲಿ ಔಪಚಾರಿಕ ದೂರು ದಾಖಲಾಗುವವರೆಗೆ ಕಾಯದೆ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ ಕ್ರಮ ಕೈಗೊಳ್ಳಬೇಕು. ದೇಶದ ಜಾತ್ಯತೀತ ಗುಣವನ್ನು ಕಾಪಾಡಲು ಇಂತಹ ಕ್ರಮ ಅಗತ್ಯ ಎಂದು ಸೂಚಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Mumbai : ಮುಂಬೈನಲ್ಲಿ 15 ದಿನ ಸೆಕ್ಷನ್ 144 ಜಾರಿ!


ಇಂತಹ ಹೇಳಿಕೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಕರಣ ದಾಖಲಿಸುವಂತೆ ದೆಹಲಿ, ಯುಪಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕ್ರಮ ಕೈಗೊಳ್ಳಲು ವಿಫಲವಾದರೆ ನ್ಯಾಯಾಲಯದ ನಿಂದನೆ ಎಂದು ಪರಿಗಣಿಸಲಾಗುವುದು. ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಉಳಿದ ಆಕ್ಷೇಪಾರ್ಹ ಹೇಳಿಕೆಗಳ ವಿರುದ್ಧ ಅಕ್ಟೋಬರ್ 9 ರಂದು ದೆಹಲಿ ಪೊಲೀಸರಿಂದ ಕ್ರಮ ಕೈಗೊಂಡ ವರದಿಯನ್ನು ನ್ಯಾಯಾಲಯವು ಕೇಳಿದೆ.


ರಾಜ್ಯ ಪೊಲೀಸರಿಗೆ ನೋಟಿಸ್ ಜಾರಿ:


ಇದರೊಂದಿಗೆ ದೆಹಲಿ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ಪೊಲೀಸರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ದ್ವೇಷದ ಭಾಷಣದಲ್ಲಿ ತೊಡಗಿರುವವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನ್ಯಾಯಾಲಯ ಕೇಳಿದೆ. ದೂರು ಇಲ್ಲದಿದ್ದರೂ ಪೊಲೀಸರೇ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದ್ಧಟತನದ ಭಾಷಣದ ಪ್ರಕರಣದಲ್ಲಿ, ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಭಾರತೀಯ ಸೇನೆಯ ALH ಹೆಲಿಕಾಪ್ಟರ್ ಪತನ


'ಧರ್ಮದ ಹೆಸರಿನಲ್ಲಿ ನಾವು ಎಲ್ಲಿಗೆ ತಲುಪಿದ್ದೇವೆ'


ಒಂದೋ ಕ್ರಮ ಕೈಗೊಳ್ಳಿ, ಇಲ್ಲದಿದ್ದರೆ ಅವಹೇಳನಕ್ಕೆ ಸಿದ್ಧರಾಗಿ ಎಂದು ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ಖಡಕ್ ಆಗಿ ಹೇಳಿದೆ. ಪ್ರಚೋದನಕಾರಿ ಭಾಷಣದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ 21ನೇ ಶತಮಾನದಲ್ಲಿ ಏನಾಗುತ್ತಿದೆ? ಧರ್ಮದ ಹೆಸರಿನಲ್ಲಿ ನಾವು ಎಲ್ಲಿಗೆ ತಲುಪಿದ್ದೇವೆ? ನಾವು ದೇವರನ್ನು ಎಷ್ಟು ಚಿಕ್ಕದಾಗಿ ಮಾಡಿದ್ದೇವೆ? ಎಂದು ಕಿಡಿಕಾರಿತು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.