Gayathri Raguramm : ಪಕ್ಷದಿಂದ ಅಮಾನತುಗೊಳಿಸಿದ ನಲವತ್ತು ದಿನಗಳ ನಂತರ, ನಟಿ ಗಾಯತ್ರಿ ರಘುರಾಮ್ ಅವರು ಮಂಗಳವಾರ ತಮಿಳುನಾಡು ಬಿಜೆಪಿಯನ್ನು ತೊರೆದಿದ್ದಾರೆ. ಅವರ ಈ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥ ಅಣ್ಣಾಮಲೈ ಅವರನ್ನು ದೂಷಿಸಿದ್ದಾರೆ. ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂದು ನಟಿ ಗಾಯತ್ರಿ ರಘುರಾಮ್ ಆರೋಪಿಸಿದರು. ಅವರ ಬೆಂಬಲಿಗರು ಅವರನ್ನು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲ್ ಮಾಡುತ್ತಿದ್ದಾರೆ ಎಂದು ಹೇಳಿದರು. ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿಯಾಗಿದ್ದ ಗಾಯತ್ರಿ ರಘುರಾಮ್ ಮಂಗಳವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : 'ನೀನು ಫೈಟರ್' ಬೇಗ ಚೇತರಿಸಿಕೋ : ಪಂತ್ ಆರೋಗ್ಯಕ್ಕೆ ಹೆಡ್ ಕೋಚ್ ಪ್ರಾರ್ಥನೆ


ಅಣ್ಣಾಮಲೈ ವಿರುದ್ಧ ಗಂಭಿರ ಆರೋಪ ಮಾಡಿರುವ ನಟಿ ಗಾಯತ್ರಿ ರಘುರಾಮ್‌, "ಬಿಜೆಪಿ ಶಿಸ್ತಿನ ಪಕ್ಷ. ಇಲ್ಲಿ ಮಹಿಳೆಯರಿಗೆ ಗೌರವ, ಸಮಾನ ಅವಕಾಶಗಳು ಸಿಗುತ್ತಿಲ್ಲ. ಭಾರವಾದ ಹೃದಯದಿಂದ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿರುವೆ. ಅಣ್ಣಾಮಲೈ ಅವರ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಇದೇ ಕಾರಣಕ್ಕೆ ನಾನು ಪಕ್ಷ ತೊರೆಯಲು ನಿರ್ಧರಿಸಿದ್ದೇನೆ" ಎಂದು ಟ್ವೀಟ್‌ ಮಾಡಿದ್ದಾರೆ. 


 


ರಾಜ್ಯದಲ್ಲೂ ಹೆಚ್ಚಾಯ್ತು BF.7 ಆತಂಕ : ಮುಂದಿನ 40 ದಿನ ಕಠಿಣ ಎಂದ ತಜ್ಞರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.