ಮುಂಬೈ: ಮುಂಬೈ ಸೇರಿದಂತೆ ನಾಗರಿಕ ಚುನಾವಣೆಗೆ ಮುನ್ನ ಮಹಾರಾಷ್ಟ್ರ ಬಿಜೆಪಿ ನಾಯಕ ಕೃಪಾ ಶಂಕರ್ ಸಿಂಗ್ ಅವರು ಉತ್ತರ ಪ್ರದೇಶದ ಶಾಲೆಗಳಲ್ಲಿ ಮರಾಠಿಯನ್ನು ಐಚ್ಛಿಕ ಭಾಷೆಯಾಗಿ ಪರಿಚಯಿಸುವಂತೆ ಒತ್ತಾಯಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಇನ್ನು ಹತ್ತು ದಿನಗಳಲ್ಲಿ ಈ ಎರಡು ರಾಶಿಯವರಿಗೆ ಭಾರೀ ಧನ ಲಾಭ ಕರುಣಿಸಲಿದ್ದಾನೆ ಶುಕ್ರ


'ಮರಾಠಿಯನ್ನು ಮಾಧ್ಯಮಿಕ ಮತ್ತು ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ಐಚ್ಛಿಕ ಭಾಷೆಯನ್ನಾಗಿ ಮಾಡಿದರೆ ಅದು ಮಹಾರಾಷ್ಟ್ರದಲ್ಲಿ ಉತ್ತಮ ಉದ್ಯೋಗಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ.ಉತ್ತರ ಪ್ರದೇಶದ ಶಾಲೆಗಳಲ್ಲಿ ಮರಾಠಿಯನ್ನು ಐಚ್ಛಿಕ ಭಾಷೆಯಾಗಿ ಸೇರಿಸಲು ನಾನು ನಿಮ್ಮನ್ನು ಕೋರುತ್ತೇನೆ" ಎಂದು ಮಹಾರಾಷ್ಟ್ರದ ಬಿಜೆಪಿ ಉಪಾಧ್ಯಕ್ಷರಾಗಿರುವ ಕೃಪಾಶಂಕರ್ ಸಿಂಗ್ ಹೇಳಿದ್ದಾರೆ.


ಇದನ್ನೂ ಓದಿ-Shri Ganeshaನ ಕೃಪೆಯಿಂದ ಎಲ್ಲಾ ಕೆಲಸಗಳಲ್ಲಿ ಕಾರ್ಯಸಿದ್ಧಿ ಪ್ರಾಪ್ತಿ, ಕೇವಲ ಈ ಸಣ್ಣ ವಸ್ತುವನ್ನು ಮನೆಗೆ ತನ್ನಿ


"ನಾನು ಕಳೆದ 50 ವರ್ಷಗಳಿಂದ ಮಹಾರಾಷ್ಟ್ರದಲ್ಲಿ ವಾಸಿಸುತ್ತಿದ್ದೇನೆ, ನನ್ನ ಅವಧಿಯಲ್ಲಿ, ವಿದ್ಯಾರ್ಥಿಗಳು (ಯುಪಿಯಿಂದ) ಮಹಾರಾಷ್ಟ್ರಕ್ಕೆ ಬಂದಾಗ, ಅವರು ಮರಾಠಿ ಭಾಷೆಯ ಜ್ಞಾನದ ಕೊರತೆಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸುವುದನ್ನು ನಾನು ಗಮನಿಸಿದ್ದೇನೆ.ಅನೇಕ ವಿದ್ಯಾರ್ಥಿಗಳು ತಮ್ಮ ಹೈಯರ್ ಸೆಕೆಂಡರಿ ಪರೀಕ್ಷೆಗಳನ್ನು ಮುಗಿಸಿದ ನಂತರ ಉದ್ಯೋಗಗಳನ್ನು ಹುಡುಕಿಕೊಂಡು ಮಹಾರಾಷ್ಟ್ರಕ್ಕೆ ವಲಸೆ ಬರುತ್ತಾರೆ, ಆದ್ದರಿಂದ ಯುಪಿ ಮುಖ್ಯಮಂತ್ರಿಗೆ ಮರಾಠಿ ಕಲಿಸಲು ವಿನಂತಿಸಿಕೊಳ್ಳಲಾಗಿದೆ" ಎಂದು ಅವರು ಹೇಳಿದರು.


ಇದನ್ನೂ ಓದಿ: Rashmika Mandanna: ಖ್ಯಾತ ಮ್ಯಾಗಜೀನ್ ‘ಫಿಲ್ಮ್‌ಫೇರ್‌’ನ ಕವರ್​ ಪೇಜ್​ನಲ್ಲಿ ರಶ್ಮಿಕಾ


ಮಹಾರಾಷ್ಟ್ರದ ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಇತರ ನಾಗರಿಕ ಸಂಸ್ಥೆಗಳಿಗೆ ಮುಂದಿನ ಕೆಲವು ತಿಂಗಳುಗಳಲ್ಲಿ ಚುನಾವಣೆಗಳು ನಡೆಯಲಿವೆ.ಮುಂಬೈ ಮತ್ತು ಮೆಟ್ರೋಪಾಲಿಟನ್ ಪ್ರದೇಶದ ಬಹುಪಾಲು ಮತದಾರರು ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದವರಾಗಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.