Fire breakout in Dhanbad Apartment: ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಜೋರಾಫಟಕ್‌ನ ಆಶೀರ್ವಾದ್ ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾರ್ಟ್‌ಮೆಂಟ್‌ನಲ್ಲಿ ಸಾಕಷ್ಟು ಮಂದಿ ಸಿಲುಕಿಕೊಂಡಿದ್ದಾರೆ. ಅವಘಡದಲ್ಲಿ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Budget 2023: ಬಜೆಟ್ ಮಂಡನೆಗೂ ಮುನ್ನ ಶುಭ ಸುದ್ದಿ: 2023ರಲ್ಲಿ ಹಣದುಬ್ಬರ ಇಳಿಕೆ; ಅಂಕಿ ಅಂಶಗಳು ಹೀಗಿವೆ!


ಮಾಹಿತಿ ಪ್ರಕಾರ, ಅಗ್ನಿ ದುರಂತದಲ್ಲಿ 20 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, 15 ಮಂದಿಯನ್ನು ಈಗಾಗಲೇ ರಕ್ಷಿಸಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.


“ಬಿಜೆಪಿ ಜೊತೆ ಕೈಜೋಡಿಸುವ ಬದಲು ಸಾಯುತ್ತೇನೆ”-ನಿತೀಶ್ ಕುಮಾರ್


ಮತ್ತೊಂದೆಡೆ, ಉತ್ತರ ಪ್ರದೇಶದ ರಾಜಧಾನಿ ಲಕ್ನೋದ ಬಾದ್‌ಶಾ ನಗರದ ಮೆಟ್ರೋ ನಿಲ್ದಾಣದ ಇ-ರಿಕ್ಷಾ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬ್ಯಾಟರಿ ಕೆಲಸ ನಡೆಯುತ್ತಿದ್ದ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಲಕ್ನೋದ ಡಿಎಂ ಸೂರ್ಯಪಾಲ್ ಗಂಗ್ವಾರ್ ಹೇಳಿದ್ದಾರೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಬ್ಯಾಟರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಗಾಯಗೊಂಡು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಉಳಿದ ಎಲ್ಲ ಜನರನ್ನು ರಕ್ಷಿಸಲಾಗಿದೆ. ಬೆಂಕಿ ಅನಾಹುತಕ್ಕೆ ಕಾರಣ ತನಿಖೆ ನಡೆಸಲಾಗುವುದು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.