ಸಿಎಂ ಬೊಮ್ಮಾಯಿ ನಿಮ್ಮ ಮುಖಕ್ಕೆ ಉಗಿದಿದ್ದಾರೆ- ಶಿವಸೇನಾ ವಕ್ತಾರ ಸಂಜಯ್ ರಾವತ್

ಛತ್ರಪತಿ ಶಿವಾಜಿ ಮಹಾರಾಜರ ವಿರುದ್ಧ ಕೆಲವು ಸಾರ್ವಜನಿಕ ವ್ಯಕ್ತಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳ ಬಗ್ಗೆ ಬಿಜೆಪಿ ಮೌನವಹಿಸಿದೆ.ಮರಾಠಯೋಧನಿಗೆ ಮಾಡಿರುವ ಅವಮಾನಗಳಿಗೆ ಪ್ರತಿಕಾರ ತೀರಿಸಿಕೊಳ್ಳಲಾಗುವುದು ಎಂದು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಎಚ್ಚರಿಸಿದ್ದಾರೆ.

Last Updated : Dec 3, 2022, 03:47 PM IST
  • ಭಾಷಾವಾರು ರಾಜ್ಯಗಳ ಮರುಸಂಘಟನೆಯ ನಂತರ ಎದ್ದಿರುವ ಗಡಿ ವಿವಾದವು 1957 ರಕ್ಕೂ ಹಿಂದಿನದು.
  • ]ಪ್ರಸ್ತುತ ಕರ್ನಾಟಕದ ಭಾಗವಾಗಿರುವ 814 ಮರಾಠಿ ಮಾತನಾಡುವ ಹಳ್ಳಿಗಳಿಗೆ ಹಕ್ಕು ಸಲ್ಲಿಸಿದೆ.
  • ಕರ್ನಾಟಕವು ಭಾಷಾವಾರು ರೇಖೆಗಳ ಮೇಲೆ ಮಾಡಿದ ಗಡಿರೇಖೆಯನ್ನು ಅಂತಿಮವಾಗಿ ನಿರ್ವಹಿಸುತ್ತದೆ.
ಸಿಎಂ ಬೊಮ್ಮಾಯಿ ನಿಮ್ಮ ಮುಖಕ್ಕೆ ಉಗಿದಿದ್ದಾರೆ- ಶಿವಸೇನಾ ವಕ್ತಾರ ಸಂಜಯ್ ರಾವತ್  title=
file photo

ಮುಂಬೈ: ಛತ್ರಪತಿ ಶಿವಾಜಿ ಮಹಾರಾಜರ ವಿರುದ್ಧ ಕೆಲವು ಸಾರ್ವಜನಿಕ ವ್ಯಕ್ತಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳ ಬಗ್ಗೆ ಬಿಜೆಪಿ ಮೌನವಹಿಸಿದೆ.ಮರಾಠಯೋಧನಿಗೆ ಮಾಡಿರುವ ಅವಮಾನಗಳಿಗೆ ಪ್ರತಿಕಾರ ತೀರಿಸಿಕೊಳ್ಳಲಾಗುವುದು ಎಂದು ರಾಜ್ಯಸಭಾ ಸಂಸದ ಸಂಜಯ್ ರಾವುತ್ ಎಚ್ಚರಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ, ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಮತ್ತು ರಾಜ್ಯ ಪ್ರವಾಸೋದ್ಯಮ ಸಚಿವ ಮಂಗಲ್ ಪ್ರಭಾತ್ ಲೋಧಾ ಅವರು ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಪ್ರಸ್ತಾಪಿಸಿ ಸಂಜಯ್ ರಾವತ್ ಮಾತನಾಡುತ್ತಿದ್ದರು. 

ಇದನ್ನೂ ಓದಿ: ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಕರ್ನಾಟಕದ ಮುಖ್ಯಮಂತ್ರಿಗಳು ಪ್ರಸ್ತುತ ಆಡಳಿತದ ಮುಖಕ್ಕೆ ಉಗುಳುತ್ತಾರೆ ಆದರೆ ರಾಜ್ಯ ಸರ್ಕಾರಕ್ಕೆ ಸ್ವಾಭಿಮಾನವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Arecanut today price: ರಾಜ್ಯದಲ್ಲಿ ಮತ್ತೆ ಭಾರೀ ಕುಸಿತ ಕಂಡ ಅಡಿಕೆ ಬೆಲೆ

ಇದೆ ವೇಳೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜಾತ್ ತಹಸಿಲ್‌ನಲ್ಲಿ ಕೆಲವು ಗ್ರಾಮಗಳಿಗೆ ನೀರು ಬಿಡುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಪ್ರಸ್ತಾಪಿಸಿದ ಸಂಜಯ್ ರಾವತ್ "ಕರ್ನಾಟಕ ಬಿಡುವ ನೀರಿನಲ್ಲಿ ಅವರು (ಸರ್ಕಾರ) ಮುಳುಗಬೇಕು. ಕಳೆದ 50-55 ವರ್ಷಗಳಲ್ಲಿ ಮಹಾರಾಷ್ಟ್ರ ಈ ರೀತಿಯ ದಾಳಿಯನ್ನು ಎದುರಿಸಿಲ್ಲ, ಪಕ್ಕದ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ನಿಮಗೆ ಸವಾಲು ಹಾಕುತ್ತಿದ್ದಾರೆ? ನಿಮ್ಮ ಆತ್ಮ ಗೌರವ ಎಲ್ಲಿ? ಕರ್ನಾಟಕದ ಸಿಎಂ ಮುಖದ ಇಲ್ಲಿನ ಸರ್ಕಾರದ ಮೇಲೆ ಉಗುಳುತ್ತಿದ್ದಾರೆ" ಎಂದು ಟೀಕಿಸಿದರು.

ಇದನ್ನೂ ಓದಿ: ಕರ್ತವ್ಯದ ವೇಳೆ ಕುಸಿದು ಬಿದ್ದು ಇನ್ಸ್ ಪೆಕ್ಟರ್ ಸಾವು

ಭಾಷಾವಾರು ರಾಜ್ಯಗಳ ಮರುಸಂಘಟನೆಯ ನಂತರ ಎದ್ದಿರುವ ಗಡಿ ವಿವಾದವು 1957 ರಕ್ಕೂ ಹಿಂದಿನದು. ಮಹಾರಾಷ್ಟ್ರವು ಹಿಂದಿನ ಬಾಂಬೆ ಪ್ರೆಸಿಡೆನ್ಸಿಯ ಭಾಗವಾಗಿದ್ದ ಬೆಳಗಾವಿಯ ಗಡಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಾಠಿ ಮಾತನಾಡುವ ಜನಸಂಖ್ಯೆಯನ್ನು ಹೊಂದಿರುವ ಹಿನ್ನೆಲೆಯಲ್ಲಿ ಅದು ಹಕ್ಕನ್ನು ಸಲ್ಲಿಸಿತು.ಪ್ರಸ್ತುತ ಕರ್ನಾಟಕದ ಭಾಗವಾಗಿರುವ 814 ಮರಾಠಿ ಮಾತನಾಡುವ ಹಳ್ಳಿಗಳಿಗೆ ಹಕ್ಕು ಸಲ್ಲಿಸಿದೆ. ಕರ್ನಾಟಕವು ಭಾಷಾವಾರು ರೇಖೆಗಳ ಮೇಲೆ ಮಾಡಿದ ಗಡಿರೇಖೆಯನ್ನು ಅಂತಿಮವಾಗಿ ನಿರ್ವಹಿಸುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News