ನವದೆಹಲಿ: ಮಮತಾ ಬ್ಯಾನರ್ಜಿಯವರು ಒಂದು ವಿಭಾಗವನ್ನು ಅವಮಾನಿಸಲು ಈ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಮೊಕದ್ದಮೆ ಹೂಡಲು ಯೋಚಿಸುತ್ತಿರುವುದಾಗಿ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇನ್ನೊಂದೆಡೆಗೆ ಸಿಎಂ ಮಮತಾ ಬ್ಯಾನರ್ಜೀ ಯಾವುದೇ ದ್ವೇಷ ಮತ್ತು ಹಿಂಸಾಚಾರದ ಘಟನೆಯನ್ನು ತಪ್ಪಿಸಲು ರಾಜ್ಯದಲ್ಲಿ ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ' ಪ್ರದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಎಂದು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಟಿಎಂಸಿ ಸರ್ಕಾರ ವಿಧಿಸಿರುವ ನಿಷೇಧದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಚಿತ್ರದ ನಿರ್ಮಾಪಕ ವಿಪುಲ್ ಶಾ ಹೇಳಿದ್ದಾರೆ.


ಇದನ್ನೂ ಓದಿ: ನಿಮ್ಮ ಹೊಲಸು ರಾಜಕೀಯಕ್ಕೆ ಅಪ್ಪು ಹೆಸರು ತರಬೇಡಿ: ಪ್ರಕಾಶ್ ರೈ


 ಹೌರಾದಲ್ಲಿರುವ ರಾಜ್ಯ ಸಚಿವಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ "ದಿ ಕಾಶ್ಮೀರ ಫೈಲ್ಸ್' ಎಂದರೇನು? ಇದು ಒಂದು ವಿಭಾಗವನ್ನು ಅವಮಾನಿಸಲು ಮಾಡಿದಂತಹ ಚಿತ್ರ, ಇನ್ನೂ 'ಕೇರಳ ಸ್ಟೋರಿ' ಎಂದರೇನು?...ಇದೊಂದು ತಿರುಚಿದ ಕಥೆ.ಬಿಜೆಪಿ ಕೇರಳದ ಕಥೆಯನ್ನು ತಿರುಚಿದ ಕಥೆಯನ್ನು ತೋರಿಸುತ್ತಿದೆ.ಕೆಲವು ದಿನಗಳ ಹಿಂದೆ, ಬಿಜೆಪಿಯಿಂದ ಹಣ ಪಡೆದ ಕೆಲವು ತಾರೆಗಳು ಬಂಗಾಳಕ್ಕೆ ಬಂದರು ಮತ್ತು ಕೆಲವು ತಿರುಚಿದ ಮತ್ತು ಹೆಣೆದ ಕಥೆಯೊಂದಿಗೆ ಅವರು ಬಂಗಾಳ ಫೈಲ್‌ಗಳನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ದೂರಿದರು.


ಇದನ್ನೂ ಓದಿ: ರಾಹುಲ್‌ ಗಾಂಧಿಯಿಂದ ಚಿಕ್ಕೋಡಿಯಲ್ಲಿ ಭರ್ಜರಿ ಕ್ಯಾಂಪೇನ್


ಈಗ ಈ ದಿ ಕೇರಳ ಸ್ಟೋರಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಸರ್ಕಾರಿ ಅಧಿಕಾರಿಯೊಬ್ಬರು "ಯಾವುದೇ ದ್ವೇಷ ಮತ್ತು ಹಿಂಸಾಚಾರದ ಘಟನೆಯನ್ನು ತಪ್ಪಿಸಲು ಮತ್ತು ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಲು, 'ದಿ ಕೇರಳ ಸ್ಟೋರಿ' ಪ್ರದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಸಿಎಂ ಸೂಚಿಸಿದ್ದಾರೆ"ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.