ರಫೇಲ್ ತೀರ್ಪು: ಮರು ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ತನ್ನ ಡಿಸೆಂಬರ್ 14, 2018 ರ ವಿರುದ್ಧ ಸಲ್ಲಿಸಿದ ಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ರಫೇಲ್ ಫೈಟರ್ ಜೆಟ್‌ಗಳ ಖರೀದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.  

Last Updated : Nov 14, 2019, 12:26 PM IST
ರಫೇಲ್ ತೀರ್ಪು: ಮರು ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ title=

ನವದೆಹಲಿ: ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ತನ್ನ ಡಿಸೆಂಬರ್ 14, 2018 ರ ವಿರುದ್ಧ ಸಲ್ಲಿಸಿದ ಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ರಫೇಲ್ ಫೈಟರ್ ಜೆಟ್‌ಗಳ ಖರೀದಿಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.  

ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಎಫ್‌ಐಆರ್ ನೋಂದಣಿಗೆ ಸಲ್ಲಿಸಿದ ಸಲ್ಲಿಕೆಗಳು ನ್ಯಾಯಯುತವೆಂದು ನಾವು ಪರಿಗಣಿಸುವುದಿಲ್ಲ ಎಂದು ತೀರ್ಪಿನ ವೇಳೆ ಹೇಳಿದರು.

ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್‌ನಿಂದ 36 ಜೆಟ್‌ಗಳನ್ನು 59,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಿದ ಭ್ರಷ್ಟಾಚಾರದ ಆರೋಪದ ಬಗ್ಗೆ ಸಿಬಿಐ ತನಿಖೆಯನ್ನು ಡಿಸೆಂಬರ್ ತೀರ್ಪು ನಿರಾಕರಿಸಿತು. ಇದಾದ ನಂತರ ವಕೀಲ ಪ್ರಶಾಂತ್ ಭೂಷಣ್ ಮತ್ತು ಮಾಜಿ ಕೇಂದ್ರ ಸಚಿವರಾದ ಯಶ್ವಂತ್ ಸಿನ್ಹಾ ಮತ್ತು ಅರುಣ್ ಶೌರಿ ಪರಿಶೀಲನಾ ಮನವಿಯನ್ನು ಡಿಸೆಂಬರ್‌ನಲ್ಲಿ ಸಲ್ಲಿಸಿದ್ದರು. ನಂತರ, ಸುಪ್ರೀಂ ಕೋರ್ಟ್ ತನ್ನ ಡಿಸೆಂಬರ್ 14 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಾಲಯವು ತನ್ನ ತೀರ್ಪನ್ನು ಮೇ 10ಕ್ಕೆ ಕಾಯ್ದಿರಿಸಿತ್ತು.

ರಾಹುಲ್ ಗಾಂಧಿಗೆ ನಿರಾಳ 

ಇನ್ನೊಂದೆಡೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರಿಗೆ ನ್ಯಾಯ್ಯಾಂಗ ನಿಂದನೆ ವಿಚಾರದಲ್ಲಿ ನಿರಾಳವಾಗಿದೆ. ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರ ಕ್ಷಮೆಯಾಚನೆಯನ್ನು ಸುಪ್ರೀಂಕೋರ್ಟ್ ಗುರುವಾರ ಅಂಗೀಕರಿಸಿದೆ. ಅಲ್ಲದೆ ಕೋರ್ಟಿನ ಪೂರ್ಣ ಆದೇಶವನ್ನು ಓದದೆ ರಾಹುಲ್ಗಾಂಧಿ ರಾಜಕೀಯ ಹೇಳಿಕೆಗಳನ್ನು ನೀಡಬಾರದು.  ಭವಿಷ್ಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.ಇದನ್ನು ಮುಂದುವರೆಸಲು ಬಯಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪ್ರಧಾನಿ ಮೋದಿ ವಿರುದ್ಧದ ರಫೇಲ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ 'ಚೌಕಿದಾರ್ ಚೋರ್ ಹೈ' ಹೇಳಿಕೆಯನ್ನು ತಪ್ಪಾಗಿ ಆರೋಪಿಸಿದ್ದಕ್ಕಾಗಿ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ಈ ಅರ್ಜಿಯನ್ನು ಸಲ್ಲಿಸಿದ್ದರು.

Trending News