Ayodhya: ರಾಮನಗರಿಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದ ಯೋಗಿ ಸರ್ಕಾರ

Ayodhya: ಅಯೋಧ್ಯೆಯ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಎಲ್ಲಿಯೂ ಮದ್ಯ ಮಾರಾಟ ಇರುವುದಿಲ್ಲ. ಸುಮಾರು ಇನ್ನೂರೈವತ್ತು ಕಿಲೋ ಮೀಟರ್‌ಗಳ ಸ್ಮಾರಕದ ಮೇಲೆ ಎಲ್ಲೂ ಮದ್ಯದಂಗಡಿ ಇರುವಂತಿಲ್ಲ.

Written by - Yashaswini V | Last Updated : Dec 28, 2023, 02:24 PM IST
  • ಅಯೋಧ್ಯೆಯಲ್ಲಿ 2018ರ ಹಿಂದೆಯೇ ಮದ್ಯವನ್ನು ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.
  • ಈ ಪ್ರದೇಶದ ಸಂತರು ಮತ್ತು ಸಾಧುಗಳು 'ಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು' ಮದ್ಯ ಮತ್ತು ಮಾಂಸವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದರು.
Ayodhya: ರಾಮನಗರಿಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದ ಯೋಗಿ ಸರ್ಕಾರ  title=

Ayodhya: ರಾಮನಗರಿ ಅಯೋಧ್ಯೆಯಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಸಿದ್ಧತೆ ನಡೆದಿದೆ. ಶೀಘ್ರದಲ್ಲೇ ರಾಮನಗರಿಯನ್ನು ಮದ್ಯ ಮುಕ್ತ ಎಂದು ಘೋಷಿಸಬಹುದು. ಈ ಬಗ್ಗೆ ಉತ್ತರ ಪ್ರದೇಶ ಸರ್ಕಾರದ ಅಬಕಾರಿ ಸಚಿವ ನಿತಿನ್ ಅಗರ್ವಾಲ್ ದೊಡ್ಡ ಘೋಷಣೆ ಮಾಡಿದ್ದಾರೆ. ಅಬಕಾರಿ ಸಚಿವರಿಂದ ಈಗಾಗಲೇ ಅಬಕಾರಿ ಇಲಾಖೆಗೆ ಸೂಚನೆಯನ್ನೂ ನೀಡಲಾಗಿದೆ.

ಅಯೋಧ್ಯೆಯಲ್ಲಿರುವ 84 ಕೋಸಿ ಪರಿಕ್ರಮ ಮಾರ್ಗದಲ್ಲಿ ಎಲ್ಲಿಯೂ ಮದ್ಯ ಮಾರಾಟ ಮಾಡುವುದಿಲ್ಲ ಎಂದು ಅಬಕಾರಿ ಸಚಿವ ನಿತಿನ್ ಅಗರ್ವಾಲ್ ತಿಳಿಸಿದ್ದಾರೆ. ಸುಮಾರು 250 ಕಿಲೋ ಮೀಟರ್‌ನ ಸ್ಮಾರಕದ ಮೇಲೆ ಎಲ್ಲೂ ಮದ್ಯದಂಗಡಿ ಇರುವಂತಿಲ್ಲ. ಈಗಾಗಲೇ ಇದ್ದ ಮದ್ಯದ ಅಂಗಡಿಗಳ ಪೈಕಿ ಕೆಲವು ಅಂಗಡಿಗಳನ್ನು ತೆರೆವುಗೊಳಿಸಿದ್ದೇವೆ. ಇದಲ್ಲದೆ ಮುಂದೆ ಹೊಸ ಮದ್ಯದ ಅಂಗಡಿ ತೆರೆಯಲು ಮಂಜೂರಾತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ- ಆಧ್ಯಾತ್ಮಿಕ ಪ್ರವಾಸ ತಾಣ ಆಗ್ತಾಯಿದೆ ಅಯೋಧ್ಯೆ

ಮದ್ಯ ನಿಷೇಧ!
ಯೋಗಿ ಆದಿತ್ಯನಾಥ್ ಸರ್ಕಾರವು ಫೈಜಾಬಾದ್ ಜಿಲ್ಲೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದಾಗ ಪವಿತ್ರ ನಗರವಾದ ಅಯೋಧ್ಯೆಯಲ್ಲಿ 2018ರ ಹಿಂದೆಯೇ ಮದ್ಯವನ್ನು ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಈ ಪ್ರದೇಶದ ಸಂತರು ಮತ್ತು ಸಾಧುಗಳು 'ಸ್ಥಳದ ಪಾವಿತ್ರ್ಯತೆಯನ್ನು ಕಾಪಾಡಲು' ಮದ್ಯ ಮತ್ತು ಮಾಂಸವನ್ನು ನಿಷೇಧಿಸಬೇಕೆಂದು ಒತ್ತಾಯಿಸಿದ್ದರು. ಹಾಗಾಗಿ ಅಯೋಧ್ಯೆಯಲ್ಲಿ ಮದ್ಯ ನಿಷೇಧಿಸಲಾಗಿತ್ತು.

ಕಳೆದ ವರ್ಷ ಜೂನ್‌ ತಿಂಗಳಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ಅಯೋಧ್ಯೆ ಮತ್ತು ಮಥುರಾದ ದೇವಾಲಯ ಮತ್ತು ಸುತ್ತಮುತ್ತ ಇರುವ ಸಣ್ಣ ಪುಟ್ಟ ದೇವಾಲಯಗಳ‌ ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿತ್ತು. ಇದೀಗ  ರಾಮ ಮಂದಿರ ಇರುವ ಅಯೋಧ್ಯೆಯಲ್ಲಿ ಮತ್ತು ಕೃಷ್ಣ ಜನ್ಮಭೂಮಿಯಾದ ಮಥುರಾದಲ್ಲಿ ಮದ್ಯ ಮಾರಾಟ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ- ರಾಕಿಂಗ್‌ ಸ್ಟಾರ್‌ ಯಶ್‌ಗೂ ಬಂತು ರಾಮಮಂದಿರ ಉದ್ಘಾಟನೆಗೆ ಆಹ್ವಾನ!

ಅಲ್ಲದೆ, ಅಯೋಧ್ಯೆಯ ಮದ್ಯ ಮಾರಾಟಗಾರರ ಪರವಾನಗಿಯನ್ನೂ ಅಧಿಕಾರಿಗಳು ರದ್ದುಗೊಳಿಸಿದ್ದಾರೆ. ಮಥುರಾ ಆಡಳಿತವು ದೇವಸ್ಥಾನಗಳ ಬಳಿ ಇರುವ ಮೂವತ್ತೇಳು ಮದ್ಯ, ಬಿಯರ್ ಮತ್ತು ಗಾಂಜಾ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಮಥುರಾದಲ್ಲಿನ ಹೋಟೆಲ್‌ಗಳಲ್ಲಿರುವ ಮೂರು ಪಬ್‌ಗಳನ್ನು ಕೂಡ ಮುಚ್ಚಿಸುವಂತೆ ಸೂಚನೆ ನೀಡಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News