ಬೆಂಗಳೂರು: ಬಿಜೆಪಿಯವರಂತಹ ಜಾತಿವಾದಿಗಳು ಬೇರಾರು ಇಲ್ಲ, ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಸ್ವಾರ್ಥಕ್ಕಾಗಿ ಹಲವರು ಹೋಗ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದೆ.ಆದರೆ ಬಿಜೆಪಿಯವರು ನನ್ನ ಹೇಳಿಕೆಯನ್ನು ತಮಗೆ ಬೇಕಾದಂತೆ ತಿರುಚಿ, ನನ್ನ ವಿರುದ್ಧ ಹೋರಾಟ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ (Siddaramaiah) ಕಿಡಿ ಕಾರಿದ್ದಾರೆ.


COMMERCIAL BREAK
SCROLL TO CONTINUE READING

ಮಂಡ್ಯದ ಕನಕ ಭವನದ ಆವರಣದಲ್ಲಿ ನಿರ್ಮಿಸಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನ ಹಾಗೂ ಅತಿಥಿ ಗೃಹದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು.


ಇದನ್ನೂ ಓದಿ: ಹತ್ತಿದ ಏಣಿ ಒದೆಯುವುದರಲ್ಲಿ ‘ಬುರುಡೆರಾಮಯ್ಯ’ ನಿಸ್ಸೀಮರು: ಬಿಜೆಪಿ ಟೀಕೆ


"ನನ್ನ ಪ್ರತಿಕೃತಿ ಸುಟ್ಟ ತಕ್ಷಣ ನಾನು ಸುಟ್ಟೋಗಲ್ಲ.ನನ್ನ ಜನ, ನನ್ನ ಪ್ರೀತಿಸುವವರು ಸುಟ್ಟೋಗಲ್ಲ.ಎಲ್ಲರೂ ಸಮಾನವಾಗಿರಬೇಕು, ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಬೇಕು, ಮನುಷ್ಯರಾಗಿ, ಸಮಾನರಾಗಿ ಬದುಕುವಂತಾಗಬೇಕು ಎಂಬ ನನ್ನ ನಿಲುವಿಗೆ ನಾನು ಈಗಲೂ ಬದ್ಧ.ಸಿದ್ದರಾಮಯ್ಯ ಕುರುಬ ಸಮಾಜಕ್ಕೆ ಏನು ಕೊಟ್ಟಿದ್ದಾರೆ? ಎಂದು ಕೆಲವರು ಕೇಳ್ತಾರೆ. ಒಂದು ಜಾತಿಯಲ್ಲಿ ಮಾತ್ರ ಬಡವರಿದ್ದಾರ? ಮುಖ್ಯಮಂತ್ರಿಯಾಗಿ ಒಂದು ಸಮಾಜದ ಅಭಿವೃದ್ಧಿ ಮಾತ್ರ ಬಯಸುವುದು ಸರಿಯೇ? ಹೀಗಾಗಿ ಅವಕಾಶದಿಂದ ವಂಚಿತರಾದ ಎಲ್ಲ ಜನರ ಪರ ನಾನು ಕೆಲಸ ಮಾಡಿದ್ದೇನೆ ಎಂದು ಹೇಳಿದರು.


ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಭಾವಿಗಳ ಕುಟಿಲ ಕೂಟ: ಬಿಜೆಪಿ ಆಕ್ರೋಶ


"ಕೆಂಪೇಗೌಡರು, ಕಿತ್ತೂರು ರಾಣಿ ಚೆನ್ನಮ್ಮ, ಟಿಪ್ಪು, ಭಗೀರಥ, ಕೃಷ್ಣ, ವೇಮನ ಮತ್ತಿತರರ ಜಯಂತಿ ಆಚರಣೆ ಮಾಡಿದ್ದು ನಮ್ಮ ಸರ್ಕಾರ. ಜಾತಿ, ಧರ್ಮಗಳನ್ನು ಮೀರಿ ಸಾಧನೆಯನ್ನು ಮಾಡಿದವರ ಜಯಂತಿ ಆಚರಣೆಗೆ ಜಾತಿ ಏಕೆ? ಸಮಾಜದಲ್ಲಿ ಜಾತಿ ವಿಷಬೀಜ ಬಿತ್ತುವ ಕೊಳಕು ಮನಸ್ಸಿನವರಿಗೆ ಮಾತ್ರ ನಾನು ಜಾತಿವಾದಿಯಂತೆ ಕಾಣುವುದು.ನನ್ನನ್ನು ಜಾತಿವಾದಿ ಎನ್ನುವವರು ಅನ್ನಭಾಗ್ಯ, ಕ್ಷೀರ ಭಾಗ್ಯ, ಕೃಷಿ ಭಾಗ್ಯ, ಕ್ಷೀರಧಾರೆ, ವಿದ್ಯಾಸಿರಿ, ಸಾಲಮನ್ನಾ ಮುಂತಾದ ಯೋಜನೆಗಳ ಫಲಾನುಭವಿಗಳ ಬಳಿ ಸಿದ್ದರಾಮಯ್ಯ ಜಾತಿವಾದಿಯೇ ಎಂದು ಕೇಳಿನೋಡಿ ಎಂದು ಹೇಳಿದರು.


ಜಿಲ್ಲಾ ಕುರುಬರ ಸಂಘದ ವತಿಯಿಂದ ಮಂಡ್ಯದ ಕನಕ ಭವನದ ಆವರಣದಲ್ಲಿ ನಿರ್ಮಿಸಿರುವ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನ ಹಾಗೂ ಅತಿಥಿ ಗೃಹದ ಉದ್ಘಾಟನೆಯನ್ನು ಇಂದು ನೆರವೇರಿಸಿದೆ.‌ ಕಾಗಿನೆಲೆ ಶ್ರೀ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿ, ಮಾಜಿ ಸಚಿವರಾದ ಆತ್ಮಾನಂದ, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮುಖಂಡರಾದ ಶಿವಣ್ಣ, ಗಣಿಗ ರವಿ, ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಹಾಜರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ