ಬೆಂಗಳೂರು: ವೇಗವಾಗಿ ಚಲಿಸುತ್ತಿದ್ದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ತಡರಾತ್ರಿ ಕಾಮಾಕ್ಷಿಪಾಳ್ಯ ಸಂಚಾರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ನಗರದ ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆ ಬಳಿ ಭಾನುವಾರ ರಾತ್ರಿ 1.30ರ ವೇಳೆಯಲ್ಲಿ ಯಮಹಾ R15 ಬೈಕ್ನಲ್ಲಿ ಹೋಗುತ್ತಿದ್ದ ಮೂವರು ಇಂಜಿನಿಯರುಗಳು ರಸ್ತೆ ಡಿವೈಡರ್ ಎಗ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರನ್ನು ಅನಿಲ್, ಕಾರ್ತಿಕ್ ಮತ್ತು ಶ್ರೀನಾಥ್ ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. 


ಅಪಘಾತದಲ್ಲಿ ಮೃತಪಟ್ಟ ಅನಿಲ್​ ಅವರ ನಿಶ್ಚಿತಾರ್ಥ ಇದೇ ಗುರುವಾರ ನಡೆಯಬೇಕಿತ್ತು ಎನ್ನಲಾಗಿದೆ. ಘಟನೆ ಬಗ್ಗೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.