ಜಮ್ಮು : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಫತೇ ಕಡಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದೆ. ಈ ಘಟನೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ.



COMMERCIAL BREAK
SCROLL TO CONTINUE READING

ಪ್ರದೇಶದ ಕೆಲವು ಭಾಗಗಳಲ್ಲಿ ಹಾರ್ಡ್ಕೋರ್ ಭಯೋತ್ಪಾದಕರು ಅಡಗಿ ಕುಳಿತಿರುವ ಬಗ್ಗೆ ಗುಪ್ತಚರರಿಂದ ನಿಖರ ಮಾಹಿತಿ ಪಡೆದ ಬಳಿಕ ಭಾರತೀಯ ಸೇನಾಪಡೆ ಹಾಗೂ ಸಿಆರ್ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಸೇನಾಪಡೆಗಳ ಮೇಲೆ  ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತವರೆದ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಲು ಆರಂಭಿಸಿದ್ದಾರೆ. 



ಈ ಪ್ರದೇಶದಲ್ಲಿ ಎಲ್ಇಟಿ (ಲಷ್ಕರ್-ಇ-ತೊಯ್ಬಾ)ಉಗ್ರ ಸಂಘಟನೆಯ ಕಮಾಂಡರ್ ಆಗಿರುವುದಾಗಿ ಕೆಲವು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ಭದ್ರತಾ ಪಡೆಗಳು ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. 


ಮುನ್ನೆಚ್ಚರಿಕೆಯ ಕ್ರಮವಾಗಿ, ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಅಮಾನತುಗೊಳಿಸಲಾಗಿದೆ.