)
TVK Vijay on stampede : ದಳಪತಿ ವಿಜಯ್ ಅವರ ಚುನಾವಣಾ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದರು, 60 ಜನರು ಗಾಯಗೊಂಡರು. ವಿಜಯ್ ತಮ್ಮ ಪಕ್ಷದ ಪರ ಪ್ರಚಾರ ಮಾಡಲು ತಮಿಳುನಾಡಿನ ಕರೂರ್ಗೆ ಬಂದಿದ್ದರು. ಈ ವೇಳೆ ಕಾಲ್ತುಳಿತ ಉಂಟಾಗಿ ಸಾವು ನೋವು ಸಂಭವಿಸಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ದಳಪತಿ ವಿಜಯ್ ಸೇರಿದಂತೆ ಹಲವಾರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ದಳಪತಿ ವಿಜಯ್ ಈ ಘಟನೆಯ ಬಗ್ಗೆ ತಮ್ಮ ಮೊದಲ ಹೇಳಿಕೆ ನೀಡಿದ್ದಾರೆ. ವಿಜಯ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮಿಳು ಭಾಷೆಯಲ್ಲಿ ಮಾತನಾಡುತ್ತಾ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರಿಗೆ ಅವರು ಸಂತಾಪ ಸೂಚಿಸಿದ್ದಾರೆ.
ಪಿಟಿಐ ಪ್ರಕಾರ, "ಮುಖ್ಯಮಂತ್ರಿಗಳೇ, ನೀವು ಸೇಡು ತೀರಿಸಿಕೊಳ್ಳಲು ನಿರ್ಧರಿಸಿದ್ದರೆ, ನೀವು ನನಗೆ ಏನು ಬೇಕಾದರೂ ಮಾಡಬಹುದು ಆದರೆ ನನ್ನ ಪಕ್ಷದ ಜನರನ್ನು ಮುಟ್ಟಲು ಸಾಧ್ಯವಿಲ್ಲ" ಎಂದು ವಿಜಯ್ ತಮಿಳುನಾಡು ಸರ್ಕಾರದ ವಿರುದ್ಧ ಗುಡುಗಿದ್ದಾಗಿ ವರದಿಯಾಗಿದೆ.
— TVK Vijay (@TVKVijayHQ) September 30, 2025
ನಾನು ಕರೂರ್ಗೆ ಭೇಟಿ ನೀಡಲಿಲ್ಲ ಏಕೆಂದರೆ ಅದು ಇನ್ನೂ ಭೀಕರ ಪರಿಸ್ಥಿತಿಯನ್ನು ಸೃಷ್ಟಿಸಬಹುದಿತ್ತು. ನಾನು ಶೀಘ್ರದಲ್ಲೇ ನಿಮ್ಮನ್ನು ಭೇಟಿಯಾಗುತ್ತೇನೆ" ಎಂದು ವಿಜಯ್ ಹೇಳಿದರು. ಘಟನೆಯ ಸತ್ಯ ಶೀಘ್ರದಲ್ಲೇ ಹೊರಬರಲಿದೆ ಎಂದು ಹೇಳಿದ ವಿಜಯ್, ಕ್ರಮ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಹೇಳಿದರು.