ಭೀಕರ ರಸ್ತೆ ಅಪಘಾತ; ಇಬ್ಬರು ಸಾವು, 20 ಮಂದಿಗೆ ಗಾಯ

ಕೊಲ್ಲಾಪುರದ ರಾಯಗಢ ಬಳಿ ಎಕ್ಸ್ ಪ್ರೆಸ್ ವೇನಲ್ಲಿ ಎರಡು ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.   

Last Updated : May 20, 2019, 12:37 PM IST
ಭೀಕರ ರಸ್ತೆ ಅಪಘಾತ; ಇಬ್ಬರು ಸಾವು, 20 ಮಂದಿಗೆ ಗಾಯ title=

ಮುಂಬೈ: ಇಲ್ಲಿನ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೊಲ್ಲಾಪುರದ ರಾಯಗಢ ಬಳಿ ಎಕ್ಸ್ ಪ್ರೆಸ್ ವೇನಲ್ಲಿ ಎರಡು ಬಸ್ ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. 

ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Trending News