ದಂತೇವಾಡ: ಛತ್ತೀಸ್‌ಘಡದಲ್ಲಿ ಮತ್ತೆ ನಕ್ಸಲರು ಅಟ್ಟಹಾಸ ನಡೆಸಿದ್ದು, ಭದ್ರತಾ ಪಡೆಯ ಗುಂಡಿನ ದಾಳಿಗೆ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.


COMMERCIAL BREAK
SCROLL TO CONTINUE READING

ಶುಕ್ರವಾರ ತಡರಾತ್ರಿ ದಂತೇವಾಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಮೃತರಾಗಿದ್ದಾರೆ.


ಇಲ್ಲಿನ ಕಿರಂಡುಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. 


ಮೃತ ನಕ್ಸಲರ ಬಳಿಯಿದ್ದ 2 ರೈಫಲ್, 9ಎಂಎಂ ಪಿಸ್ತೋಲ್, 12 ಬೋರ್ ರೈಫಲ್ ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮತ್ತಷ್ಟು ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಎಸ್.ಪಿ.ಅಭಿಷೇಕ್ ಪಲ್ಲವ ಹೇಳಿದ್ದಾರೆ.