Lok sabha elections 2024: ಲೋಕಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದೆ. ಅದರಲ್ಲೂ ಚುನಾವಣಾ ಸಂದರ್ಭದಲ್ಲಿ ಪೊಲೀಸರು ನಿರಂತರ ತಪಾಸಣೆ ನಡೆಸುತ್ತಾರೆ. ವಿಶೇಷವಾಗಿ ರಸ್ತೆ ಮತ್ತು ಹೆದ್ದಾರಿಗಳಲ್ಲಿ ಯಾವುದೇ ಅನುಮಾನಾಸ್ಪದ ವಾಹನಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿರುತ್ತಾರೆ. ಅಲ್ಲದೆ, ಅಪಾರ ಪ್ರಮಾಣದ ನಗದು ಪತ್ತೆಯಾದರೆ, ಸೂಕ್ತ ದಾಖಲೆಗಳಿಗಾಗಿ ಪೊಲೀಸರು ವಿಚಾರಣೆ ನಡೆಸುತ್ತಾರೆ. ಸಿಕ್ಕ ಹಣಕ್ಕೆ ಸರಿಯಾಗಿ ದಾಖಲೆ ನೀಡದಿದ್ದರೆ ಪೊಲೀಸರು ಹಣ ವಶಪಡಿಸಿಕೊಳ್ಳುತ್ತಾರೆ.  


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕೋವಿಶೀಲ್ಡ್ ಲಸಿಕೆಯಿಂದ ಅಡ್ಡಪರಿಣಾಮ ಉಂಟಾಗುತ್ತದೆಂದು ಗೊತ್ತಿದ್ದರೂ ಮೋದಿ ಸರ್ಕಾರ ಲಸಿಕೆಗೆ ಒಪ್ಪಿಗೆ ನೀಡಿದ್ದೇಕೆ?: ಮೋಹನ್ ದಾಸರಿ ಪ್ರಶ್ನೆ


ಇದೀಗ ಇಲ್ಲೊಂದು ಕಡೆ ಪೊಲೀಸರಿಗೆ ಅನುಮಾನ ಚೆಕ್‌ ಮಾಡಿದಾಗ ಬೆಚ್ಚಿ ಬಿದ್ದಿದ್ದಾರೆ. ನಾಲ್ಕು ಕಂಟೈನರ್ ಗಳಲ್ಲಿ ನೋಟಿನ ಕಟ್ಟುಗಳ ರಾಶಿ ಕಂಡು ಬೆರಗಾಗಿದ್ದಾರೆ. ಸುಮಾರು 2000 ಸಾವಿರ ಕೋಟಿ ಹಣ ಸಿಕ್ಕಿದೆ ಎನ್ನಲಾಗಿದೆ. ಕೂಡಲೇ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಠೇವಣಿ ಇಡಲು ಕೇರಳದ ಕೊಚ್ಚಿಯಿಂದ ಹೈದರಾಬಾದ್ ಗೆ ನಾಲ್ಕು ಕಂಟೈನರ್ ಗಳು ಹಣ ತುಂಬಿಕೊಂಡು ಹೋಗುತ್ತಿದ್ದವು ಎಂದು ತಿಳಿದುಬಂದಿದೆ. ಇದರಿಂದ ಪೊಲೀಸರು ಹಾಗೂ ಉನ್ನತಾಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಮೊದಲಿಗೆ ಇದು ರಾಜಕಾರಣಿಗಳ ಹಣವೋ, ಯಾರದೋ ಕಪ್ಪುಹಣವೋ ಎಂದು ಹಲವು ರೀತಿಯಲ್ಲಿ ಶಂಕಿಸಲಾಗಿತ್ತು. 


ಕೊನೆಗೆ ಬ್ಯಾಂಕ್ ಗೆ ಹಣ ಜಮಾ ಮಾಡಬೇಕಾಗಿದ್ದ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿ ವಾಹನಗಳನ್ನು ಕಳುಹಿಸಿದ್ದಾರೆ. ಆಂಧ್ರ ಪ್ರದೇಶದ ಅನಂತಪುರ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. 


ಇದನ್ನೂ ಓದಿ: ಪಾಕಿಸ್ತಾನದ ಜೇಬು ತುಂಬಿಸುವ IMF ಇಷ್ಟೊಂದು ಹಣ ಎಲ್ಲಿಂದ ತರುತ್ತದೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.