ನವದೆಹಲಿ: ಅಂಕೋಲಾ ಬಳಿ ರಾಷ್ಟ್ತ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಮೃತಪಟ್ಟವರನ್ನು ಹೊರ ತೆಗೆಯಲು ಕೇಂದ್ರ ಸರ್ಕಾರ NDRF. ತಂಡವನ್ನು ನಿಯೋಜಿಸಿದ್ದು, ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವರುಣ ಅಬ್ಬರಿಸುತ್ತಿದ್ದು, ರಣ ಮಳೆಯಿಂದಾಗಿ ಅವಘಡಗಳು ಸಂಭವಿಸಿ ಸಾವು-ನೋವು ಉಂಟಾಗುತ್ತಿದೆ. ಜನರು ಬಹು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ. ಅಲ್ಲದೆ, ಉತ್ತರ ಕನ್ನಡದ ಅಂಕೋಲಾ ಸಮೀಪ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಜನರು ಮೃತಪಟ್ಟಿರುವ ಬಗ್ಗೆ ಸಚಿವ ಜೋಶಿ ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪುರಾಣದಿಂದ ಅಮೂರ್ತದವರೆಗೆ ಸ್ಪೂರ್ತಿದಾಯಕ ಭರವಸೆ ಮೂಡಿಸುವ 'ಮೊಸಾಯಿಕ್ ಆಫ್ ಮಾಡರ್ನಿಟಿ'


ಈ ದುರ್ಘಟನೆಯಲ್ಲಿ ಬಲಿಯಾಗಿ ಕಾಣೆಯಾಗಿರುವ ಮೃತರ ದೇಹಗಳ ಶೋಧ ಕಾರ್ಯ ಮುಂದುವರೆದಿದೆ. ಈ ಕಾರ್ಯಕ್ಕೆ ಎನ್​ಡಿಆರ್​ಎಫ್​ ತಂಡವನ್ನು ನಿಯೋಜಿಸಲಾಗಿದ್ದು, ಶೋಧ ಕಾರ್ಯ ಮುಂದುವರೆಸಲು ಈ ತಂಡಕ್ಕೆ ಬೇಕಾದ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ಒದಗಿಸಬೇಕು ಎಂದು ಜೋಶಿ ಒತ್ತಾಯಿಸಿದ್ದಾರೆ. ಈ ಪ್ರಕೃತಿ ವಿಕೋಪಕ್ಕೆ ಬಲಿಯಾದವರ ಕುಟುಂಬಗಳಿಗೆ ರಾಜ್ಯ ಸರ್ಕಾರ ಅಗತ್ಯ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.