ನವದೆಹಲಿ: ಕ್ರೈಸ್ತ, ಇಸ್ಲಾಂಗೆ ಮತಾಂತರವಾಗುವ ದಲಿತರು ಮೀಸಲು ಕ್ಷೇತ್ರಗಳಲ್ಲಿ ವಿಧಾನಸಭೆ, ಲೋಕಸಭೆ ಚುನಾವಣೆಗಳಿಗೆ ಸ್ಪರ್ಧಿಸುವಂತಿಲ್ಲ ಹಾಗೂ ಅಂತಹ ದಲಿತರಿಗೆ ಮೀಸಲಾತಿಯಡಿಯಲ್ಲಿ ಇರುವ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರ ಪ್ರಶ್ನೆಗೆ ಉತ್ತರಿಸಿರುವ ಕಾನೂನು ಸಚಿವ ರವಿಶಂಕರ್ ಪ್ರಸಾದ್(Ravi Shankar Prasad), ಹಿಂದೂ, ಸಿಖ್, ಬೌದ್ಧ ಮತಗಳನ್ನು ಅನುಸರಿಸುವ ದಲಿತರನ್ನು ಹೊರತುಪಡಿಸಿ, ಕ್ರೈಸ್ತ, ಮುಸಲ್ಮಾನರಾಗಿ ಮತಾಂತರ ಹೊಂದುವ ದಲಿತರಿಗೆ ಮೀಸಲಾತಿಯ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.


ಈ ರಾಜ್ಯದಲ್ಲಿ ಇಂದು ಮಧ್ಯರಾತ್ರಿಯಿಂದ ಅಗ್ಗವಾಗಲಿದೆ Petrol-Diesel, Alcohol


ಸಂವಿಧಾನದ ಪ್ಯಾರಾ 3 ರನ್ನು (ಪರಿಶಿಷ್ಟ ಜಾತಿಗಳು) ಉಲ್ಲೇಖಿಸಿರುವ ಸಚಿವರು, ದಲಿತ(Dalit)ರು ಹಿಂದೂ, ಸಿಖ್, ಬೌದ್ಧ ಧರ್ಮಗಳನ್ನು ಅನುಸರಿಸಿದರೆ ಅವರನ್ನು ಪರಿಶಿಷ್ಟ ಜಾತಿಯ ಸದಸ್ಯರೆಂದೇ ಗುರುತಿಸಲಾಗುತ್ತದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.


Mallikarjun Kharge: ಮಲ್ಲಿಕಾರ್ಜುನ ಖರ್ಗೆಗೆ 'ಭರ್ಜರಿ ಗಿಫ್ಟ್' ನೀಡಿದ ಕಾಂಗ್ರೆಸ್ ಹೈಕಮಾಂಡ್..!


ಈ ಕಾನೂನನ್ನು ಬದಲಾವಣೆ ಮಾಡುವ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ, ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.


LAC ಬಳಿ ಹಿಂದೆ ಸರಿದ China, 2 ದಿನಗಳಲ್ಲಿ ಹಿಮ್ಮೆಟ್ಟಿದ 200ಕ್ಕೂ ಹೆಚ್ಚು ಟ್ಯಾಂಕ್‌ಗಳು


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.