ರಾಮನಗರ: ಕೇರಳದಲ್ಲಿ ತನ್ನ ರೌದ್ರಾವತಾರವನ್ನು ತೋರಿದ್ದ ವರುಣ ಇದೀಗ ಉತ್ತರಾಖಂಡದಲ್ಲಿ ತನ್ನ ಪ್ರಭಾವ ಬೀರಿದ್ದಾನೆ. ಕಳೆದ ಕೆಲ ದಿನಗಳಿಂದ ಉತ್ತರಾಖಂಡದ ಹಲವು ರಾಜ್ಯಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕುಲು ಮತ್ತು ಮನಾಲಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ. 


COMMERCIAL BREAK
SCROLL TO CONTINUE READING

ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿರುವ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಕಾರನ್ನು ಟ್ರ್ಯಾಕ್ಟರ್ ಮೂಲಕ ಸಾಕಷ್ಟು ಶ್ರಮವಹಿಸಿ ಸೋಮವಾರ ರಕ್ಷಿಸಲಾಗಿದೆ. ಈ ಕಾರಿನಲ್ಲಿ ಮೂರಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ. ಹೀಗೆ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಕಾರನ್ನು ಟ್ರ್ಯಾಕ್ಟರ್ ರಕ್ಷಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.



ಕಳೆದ ಕೆಲ ದಿನಗಳಿಂದ ಭಾರೀ ಮಳೆ ಎದುರಿಸುತ್ತಿರುವ ಉತ್ತರಾಖಂಡದಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಚಾರ, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.