ಭುವನೇಶ್ವರ: ತಮ್ಮ ಫೋಟೋ ತೆಗೆಯಲು ಹೋಗಿ ಕೆಳಗೆ ಬಿದ್ದ ಫೋಟೋಗ್ರಾಫರ್ ಅನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೈ ಹಿಡಿದು ಮೇಲಕ್ಕೆತ್ತಿದ್ದ ಘಟನೆ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. 


COMMERCIAL BREAK
SCROLL TO CONTINUE READING

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಫೋಟೋ ತೆಗೆಯಲು ವಿಮಾನ ನಿಲ್ದಾಣದಲ್ಲಿ ಹರಸಾಹಸ ಮಾಡುತ್ತಿದ್ದ ಫೋಟೋಗ್ರಾಫರ್ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಇದನ್ನು ನೋಡಿದ ಕೂಡಲೇ ರಾಹುಲ್ ಗಾಂಧಿ ಎರಡು ಹೆಜ್ಜೆ ಮುಂದೆ ಹೋಗಿ ಆತನನ್ನು ಮೇಲೆತ್ತಿದ್ದಾರೆ. ಸದ್ಯ ಆ ವೀಡಿಯೋ ಸಾಮಾಜಯಾಕ್ ಜಾಲತಾಣಗಳಲ್ಲಿ ವೈರಲ್ ಆಗಿದೆ.