ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ; ದೆಹಲಿಯಲ್ಲಿ ಅಲರ್ಟ್, ತುರ್ತು ಸಭೆ ಕರೆದ ಕೇಜ್ರಿವಾಲ್

ಯಮುನಾ ದಡದ ಬಳಿ ವಾಸಿಸುವ ಅಥವಾ ಕೆಲಸ ಮಾಡುವ ಜನರಿಗೆ ಅಲರ್ಟ್ ಆಗಿ ಇರುವಂತೆ ತಿಳಿಸಲಾಗಿದೆ. ಏಕೆಂದರೆ ಭಾರೀ ಮಳೆ ಮತ್ತು ಹಟ್ನಿ ಕುಂಡ್ ಬ್ಯಾರೇಜ್‌ನಿಂದ ನೀರು ಬಿಡುಗಡೆಯಾಗುವುದರಿಂದ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Last Updated : Aug 19, 2019, 10:05 AM IST
ಯಮುನಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ; ದೆಹಲಿಯಲ್ಲಿ ಅಲರ್ಟ್, ತುರ್ತು ಸಭೆ ಕರೆದ ಕೇಜ್ರಿವಾಲ್ title=

ನವದೆಹಲಿ: ರಾಷ್ಟ್ರೀಯ ರಾಜಧಾನಿ  ದೆಹಲಿಯ ಪಕ್ಕದ ಪ್ರದೇಶಗಳಲ್ಲಿ ಯಮುನಾ ನದಿಯ ನೀರಿನ ಮಟ್ಟ ಏರುತ್ತಿರುವುದರಿಂದ, ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪರಿಸ್ಥಿತಿ ಪರಿಶೀಲಿಸಲು ತುರ್ತು ಸಭೆ ಕರೆದಿದ್ದಾರೆ.

ದೆಹಲಿಯ ನದಿಯ ನೀರಿನ ಮಟ್ಟವು 207 ಮೀಟರ್ ತಲುಪುವ ನಿರೀಕ್ಷೆಯೊಂದಿಗೆ ಜೀವ ಮತ್ತು ಆಸ್ತಿ-ಪಾಸ್ತಿಗೆ ಅಪಾಯವಿದೆ, ಇದು ಅಧಿಕೃತ ಅಪಾಯದ ಗುರುತು 205.33 ಮೀಟರ್ಗಿಂತ ಹೆಚ್ಚಾಗಿದೆ. ಜನರನ್ನು ಸ್ಥಳಾಂತರಿಸಲು ಮತ್ತು ಅವರನ್ನು ಪರಿಹಾರ ಶಿಬಿರಗಳಿಗೆ ಅಥವಾ ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ (ಪೂರ್ವ) ಅವರನ್ನು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳಿಗೆ ನಿರ್ದೇಶಿಸಲು ತಿಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ತುರ್ತು ಸಭೆಯಲ್ಲಿ ಈ ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಹಾಜರಾಗುವಂತೆ ನಿರ್ದೇಶಿಸಲಾಗಿದೆ.

ಯಮುನಾ ದಡದ ಬಳಿ ವಾಸಿಸುವ ಅಥವಾ ಕೆಲಸ ಮಾಡುವ ಜನರಿಗೆ ಅಲರ್ಟ್ ಆಗಿ ಇರುವಂತೆ ತಿಳಿಸಲಾಗಿದೆ. ಏಕೆಂದರೆ ಭಾರೀ ಮಳೆ ಮತ್ತು ಹಟ್ನಿ ಕುಂಡ್ ಬ್ಯಾರೇಜ್‌ನಿಂದ ನೀರು ಬಿಡುಗಡೆಯಾಗುವುದರಿಂದ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಹಟ್ನಿ ಕುಂಡ್ ಬ್ಯಾರೇಜ್‌ನಿಂದ ಭಾನುವಾರ ಮಧ್ಯಾಹ್ನ 3 ಗಂಟೆಯವರೆಗೆ ಸುಮಾರು 7,60,466 ಕ್ಯೂಸೆಕ್ ನೀರು ಬಿಡುಗಡೆಯಾಗಿದ್ದು, ಇದು ಯಮುನಾದ ಜಲಾನಯನ ಪ್ರದೇಶದಲ್ಲಿ ನೀರಿನ ಹೆಚ್ಚಳಕ್ಕೆ ಕಾರಣವಾಗಿದೆ. ರಾಜಧಾನಿಯ ಕುಡಿಯುವ ನೀರಿನ ಮುಖ್ಯ ಮೂಲವಾದ ಬ್ಯಾರೇಜ್‌ನಿಂದ ಬಿಡುಗಡೆಯಾದ ನೀರು ಸಾಮಾನ್ಯವಾಗಿ ದೆಹಲಿಯನ್ನು ತಲುಪಲು ಸುಮಾರು 72 ಗಂಟೆಗಳನ್ನು ತೆಗೆದುಕೊಳ್ಳುತ್ತದೆ.

1978 ರಲ್ಲಿ ದೆಹಲಿಯು ಅತ್ಯಂತ ಭೀಕರ ಪ್ರವಾಹಕ್ಕೆ ಸಾಕ್ಷಿಯಾಗಿತ್ತು. ಆ ಸಮಯದಲ್ಲಿ ನದಿಯ ನೀರಿನ ಮಟ್ಟವು 207.49 ಮೀಟರ್ ದಾಖಲೆಯನ್ನು ಮುಟ್ಟಿತು.

Trending News