ಇಂದಿನಿಂದ 3 ದಿನ ರಾಜ್ಯದ ಈ ಭಾಗಗಳಲ್ಲಿ ಬಿಡುವಿಲ್ಲದೆ ಸುರಿಯಲಿದೆ ಮಳೆ: ಪ್ರವಾಹ ಭೀತಿ, ಗುಡುಗು-ಸಿಡಿಲಿನ ಅಬ್ಬರ

Weather Update August 26, 2023: ದೇಶದಲ್ಲಿ ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ನೋಡುವುದಾದರೆ ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.

Written by - Bhavishya Shetty | Last Updated : Aug 26, 2023, 08:29 AM IST
    • ಕರಾವಳಿ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಒಂದೆರಡು ಸ್ಥಳದಲ್ಲಿ ಲಘು ಮಳೆಯಾಗಿದೆ
    • ಜುಲೈ ತಿಂಗಳ ಮಧ್ಯದಲ್ಲಿ ಅಬ್ಬರಿಸಿದ್ದ ಮಳೆರಾಯ ಆ ಬಳಿಕ ಕಣ್ಮರೆಯಾಗಿದ್ದಾನೆ
    • ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಬೀಳುವ ಸಾಧ್ಯತೆಯಿದೆ
ಇಂದಿನಿಂದ 3 ದಿನ ರಾಜ್ಯದ ಈ ಭಾಗಗಳಲ್ಲಿ ಬಿಡುವಿಲ್ಲದೆ ಸುರಿಯಲಿದೆ ಮಳೆ: ಪ್ರವಾಹ ಭೀತಿ, ಗುಡುಗು-ಸಿಡಿಲಿನ ಅಬ್ಬರ title=
Karnataka Rain

Weather Update August 26, 2023: ದೇಶದಾದ್ಯಂತ ಮಾನ್ಸೂನ್ ನಿಧಾನವಾಗುತ್ತಿದೆ. ಕೆಲವೆಡೆ ಉತ್ತಮ ಮಳೆಯಾಗಿದ್ದರೂ ಕೆಲವೆಡೆ ತಗ್ಗಿದೆ. ಖಾಸಗಿ ಏಜೆನ್ಸಿ ಸ್ಕೈಮೆಟ್ ಪ್ರಕಾರ, ಫಿರೋಜ್‌’ಪುರ, ಕರ್ನಾಲ್, ಮೀರತ್, ಅಜಂಗಢ, ಪಾಟ್ನಾ, ದಿಯೋಗರ್ ಡೈಮಂಡ್ ಹಾರ್ಬರ್ ಮತ್ತು  ಆಗ್ನೇಯದಿಂದ ಪೂರ್ವ ಮಧ್ಯ ಬಂಗಾಳ ಕೊಲ್ಲಿಯ ಮೂಲಕ ಮಾನ್ಸೂನ್ ಹಾದುಹೋಗುತ್ತಿದೆ. ಸಮುದ್ರ ಮಟ್ಟದಿಂದ 3.1 ರಿಂದ 7.6 ಕಿಮೀ ಎತ್ತರವಿರುವ ಚಂಡಮಾರುತದ ಪರಿಚಲನೆಯು ಪಶ್ಚಿಮ ಉತ್ತರ ಪ್ರದೇಶದ ದಕ್ಷಿಣದ ಕಡೆಗೆ ಸಾಗಿದೆ.

ಇದನ್ನೂ ಓದಿ: ಏಷ್ಯಾಕಪ್’ಗೆ ಆಯ್ಕೆಯಾಗಿದ್ದ ಇಬ್ಬರು ಆಟಗಾರರಿಗೆ ಕೊರೊನಾ! ರದ್ದಾಗುತ್ತಾ Asia Cup?

ದೇಶದಲ್ಲಿ ಕಳೆದ 24 ಗಂಟೆಗಳ ಹವಾಮಾನದ ಬಗ್ಗೆ ನೋಡುವುದಾದರೆ ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರ ಪಂಜಾಬ್, ಪಶ್ಚಿಮ ಉತ್ತರ ಪ್ರದೇಶ, ಛತ್ತೀಸ್‌’ಗಢ, ಮಧ್ಯಪ್ರದೇಶ, ಗುಜರಾತ್‌’ನ ಕೆಲವು ಭಾಗಗಳು, ಕರಾವಳಿ ಕರ್ನಾಟಕ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಒಂದೆರಡು ಸ್ಥಳದಲ್ಲಿ ಲಘು ಮಳೆಯಾಗಿದೆ.

ಹಿಮಾಚಲ ಪ್ರದೇಶ, ಈಶಾನ್ಯ ಭಾರತ, ಒಡಿಶಾ, ಕರಾವಳಿ ಆಂಧ್ರಪ್ರದೇಶ, ಛತ್ತೀಸ್‌’ಗಢ, ವಿದರ್ಭ, ಕೊಂಕಣ ಮತ್ತು ಗೋವಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಉತ್ತರಾಖಂಡ್, ಸಿಕ್ಕಿಂ, ಮಧ್ಯ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಎರಡು ಬಾರಿ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ.

ಇಂದು ಈ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ:

ಏಜೆನ್ಸಿ ಪ್ರಕಾರ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಛತ್ತೀಸ್‌’ಗಢ, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ, ಕೊಂಕಣ ಮತ್ತು ಗೋವಾ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಅದೇ ರೀತಿ, ಬಿಹಾರ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣದ ಕೆಲವು ಭಾಗಗಳು, ಮಧ್ಯಪ್ರದೇಶದ ಕೆಲವು ಭಾಗಗಳು, ವಿದರ್ಭ, ಮರಾಠವಾಡ, ದಕ್ಷಿಣ ಗುಜರಾತ್, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಒಂದೆರಡು ಕಡೆ ಲಘು ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಬೆಂಗಳೂರಿಗೆ ಪ್ರಧಾನಿ ಮೋದಿ: ಪೊಲೀಸರಿಂದ ಬಿಗಿಭದ್ರತೆ-ಸಂಚಾರಕ್ಕೆ ಈ ರಸ್ತೆಗಳನ್ನು ಬಳಸಲು ಸೂಚನೆ

ಕರ್ನಾಟಕದಲ್ಲಿ ಮಳೆ ಅಪ್ಡೇಟ್ ಹೀಗಿದೆ:

ಜುಲೈ ತಿಂಗಳ ಮಧ್ಯದಲ್ಲಿ ಅಬ್ಬರಿಸಿದ್ದ ಮಳೆರಾಯ ಆ ಬಳಿಕ ಕಣ್ಮರೆಯಾಗಿದ್ದಾನೆ, ಜಲಾಶಯಗಳ ನೀರಿನ ಮಟ್ಟದಲ್ಲೂ ಇದೀಗ ಇಳಿಕೆ ಕಂಡುಬರುತ್ತಿದೆ. ಆಗಸ್ಟ್‌ ಆರಂಭದಿಂದಲೂ ಇಲ್ಲಿಯವರೆಗೆ ಮಳೆ ಆರ್ಭಟ ಕಡಿಮೆಯಾಗಿದ್ದು, ಇಲಾಖೆ ಮುನ್ಸುಚನೆ ಪ್ರಕಾರ ಸೆಪ್ಟೆಂಬರ್‌ ತಿಂಗಳ ಆರಂಭದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News