ಏಮ್ಸ್ ಗೆ ದಾಖಲಾದ ಬಂಗಾಳದ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್

Written by - Zee Kannada News Desk | Last Updated : Oct 25, 2021, 08:29 PM IST
  • ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಸೋಮವಾರ ಮಧ್ಯಾಹ್ನ ಮಲೇರಿಯಾ ರೋಗನಿರ್ಣಯದ ನಂತರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.
ಏಮ್ಸ್ ಗೆ ದಾಖಲಾದ ಬಂಗಾಳದ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ title=
ಸಂಗ್ರಹ ಚಿತ್ರ

ನವದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ಅವರನ್ನು ಸೋಮವಾರ ಮಧ್ಯಾಹ್ನ ಮಲೇರಿಯಾ ರೋಗನಿರ್ಣಯದ ನಂತರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದೆ.

ಏಮ್ಸ್ ನಲ್ಲಿರುವ ಹಳೆಯ ಖಾಸಗಿ ವಾರ್ಡ್ ನಲ್ಲಿ ದಾಖಲಾಗಿದ್ದು, ಅವರಿಗೆ ವೈದ್ಯರ ತಂಡದೊಂದಿಗೆ ವೈದ್ಯ ಪ್ರಾಧ್ಯಾಪಕ ಡಾ.ನೀರಜ್ ನಿಶ್ಚಲ್ ಚಿಕಿತ್ಸೆ ನೀಡುತ್ತಿದ್ದಾರೆ.ಧಂಖರ್ ಅವರಿಗೆ ಮಲೇರಿಯಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿತ್ತು.ಶುಕ್ರವಾರ ದೆಹಲಿಗೆ ಬಂದಿದ್ದ ಅವರು ಶನಿವಾರ ರಕ್ತ ಪರೀಕ್ಷೆಗೆ ಒಳಗಾಗಿದ್ದರು. ವೈದ್ಯರ ಸೂಕ್ಷ್ಮ ನಿಗಾದಲ್ಲಿ ಅವರು ಭಂಗ ಭವನದಲ್ಲಿ ತಂಗಿದ್ದರು.

ಇದನ್ನೂ ಓದಿ-Team Babar ವಿರುದ್ಧ Virat ಸಮರ, ಪಂದ್ಯದ ಮೇಲೆ ವಿಶ್ವದ ಕಣ್ಣು, ಯಾರ ವರಸೆ ಯಾರ ಮೇಲೆ?

ಉತ್ತರ ಬಂಗಾಳಕ್ಕೆ 2 ವಾರಗಳ ಭೇಟಿಯ ಭಾಗವಾಗಿ ಅಕ್ಟೋಬರ್ 12 ರಿಂದ ಡಾರ್ಜಿಲಿಂಗ್‌ಗೆ ಭೇಟಿ ನೀಡಿದಾಗ ಅಲ್ಲಿ ಅವರಿಗೆ ಜ್ವರ ಕಾಣಿಸಿಕೊಂಡಿತು ಮತ್ತು ಕಾರಣವನ್ನು ಪತ್ತೆಹಚ್ಚಲು ರಕ್ತ ಪರೀಕ್ಷೆಗೆ ಹೋಗಲು ವೈದ್ಯರು ಸಲಹೆ ನೀಡಿದರು.ಈ ಹಿನ್ನಲೆಯಲ್ಲಿ ಅವರು ಪರೀಕ್ಷೆ ಮತ್ತು ಚಿಕಿತ್ಸೆಗಾಗಿ ದೆಹಲಿಗೆ ಆಗಮಿಸಿದರು.

ಇದನ್ನೂ ಓದಿ-Team Babar ವಿರುದ್ಧ Virat ಸಮರ, ಪಂದ್ಯದ ಮೇಲೆ ವಿಶ್ವದ ಕಣ್ಣು, ಯಾರ ವರಸೆ ಯಾರ ಮೇಲೆ?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News